ADVERTISEMENT

30 ಮಂದಿಗೆ ಕೊರೊನಾ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2020, 3:34 IST
Last Updated 27 ಅಕ್ಟೋಬರ್ 2020, 3:34 IST

ಶಿವಮೊಗ್ಗ: ಜಿಲ್ಲೆಯಲ್ಲಿ ಸೋಮವಾರ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚಿದ್ದಾರೆ. 30 ಮಂದಿಗೆ ಸೋಂಕು ದೃಢಪಟ್ಟಿದ್ದು, 101 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

386 ಜನರ ಗಂಟಲಿನ ದ್ರವದ ಪರೀಕ್ಷೆ ಮಾಡಲಾಗಿದೆ. 600 ಜನರ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ 382 ಸೇರಿ ಒಟ್ಟು 562 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌-19ನಿಂದ ಮೃತಪಟ್ಟವರ ಸಂಖ್ಯೆ 341ಕ್ಕೆ ಏರಿದೆ. ಸೋಂಕಿತರ ಸಂಖ್ಯೆ 20,558ಕ್ಕೆ ತಲುಪಿದೆ.

ಶಿವಮೊಗ್ಗ ತಾಲ್ಲೂಕಿನಲ್ಲಿ 3, ಭದ್ರಾವತಿಯಲ್ಲಿ 16, ಶಿಕಾರಿಪುರದಲ್ಲಿ 4, ತೀರ್ಥಹಳ್ಳಿಯಲ್ಲಿ 4, ಸೊರಬದಲ್ಲಿ 2 ಹಾಗೂ ಚಿಕಿತ್ಸೆಗೆ ಬೇರೆ ಜಿಲ್ಲೆಯಿಂದ ಬಂದಿದ್ದ ಒಬ್ಬರಲ್ಲಿ ಸೋಂಕು ಖಚಿತಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.