ADVERTISEMENT

ಮಹಾರಾಷ್ಟ್ರದಿಂದ ಬಂದ ಇಬ್ಬರಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 17:21 IST
Last Updated 3 ಜೂನ್ 2020, 17:21 IST

ಶಿವಮೊಗ್ಗ: ಮಹಾರಾಷ್ಟ್ರದಿಂದ ಬಂದಿದ್ದ ಇಬ್ಬರಿಗೆ ಕೊರೊನಾ ಸೋಂಕು ಇರುವುದು ಬುಧವಾರ ದೃಢಪಟ್ಟಿದೆ.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ 22 ವರ್ಷದ ಪುರುಷ (ಪಿ–3911) ಒಂದು ವರ್ಷದ ಮಗು (ಪಿ–3910) ಕೋವಿಡ್‌ನಿಂದ ಬಳಲುತ್ತಿದ್ದಾರೆ.ಮೇ 26ರಂದು ಮಹಾರಾಷ್ಟ್ರದಿಂದ ಬಂದಿದ್ದ ಅವರನ್ನು ಬೈಪಾಸ್ ಬಳಿಯ ವಸತಿ ನಿಲಯದಲ್ಲಿ ಕ್ವಾರಂಟೈನ್ಮಾಡಲಾಗಿತ್ತು.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ. ಬುಧವಾರ ನಾಲ್ವರು ಗುಣಮುಖರಾಗಿದ್ದು, ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದ 30 ಜನರುಗುಣಮುಖರಾಗಿ ಮನೆಗೆ ತೆರಳಿದ್ದಾರೆ. 23 ಜನರು ಮೆಗ್ಗಾನ್‌ ಕೋವಿಡ್‌ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಕಲ್ಲು ತೂರಾಟ: ಪಂಜಾಬ್‌ನಿಂದ ಬಂದ ಹಕ್ಕಿಪಿಕ್ಕಿ ಕ್ಯಾಂಪ್‌ನ ಮೂವರಿಗೆಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹಾಗಾಗಿ, ಹಸೂಡಿ ಹಕ್ಕಿಪಿಕ್ಕಿ ಕ್ಯಾಂಪ್, ಹರಪನಹಳ್ಳಿ ಕ್ಯಾಂಪ್‌ಗಳನ್ನು ಸೀಲ್‌ಡೌನ್‌ ಮಾಡಲಾಗಿತ್ತು.ಈ ಸಮಯದಲ್ಲಿ ಕೆಲವರಿಗೆಅಗತ್ಯ ಆಹಾರ ಸಿಗದ ಕಾರಣ ಸೀಲ್‌ಡೌನ್ ಉಲ್ಲಂಘಿಸಿ ಊರಿನಿಂದ ಹೊರಗೆ ಬಂದಿದ್ದರು. ಇದನ್ನು ಗಮನಿಸಿದ ಚಿಕ್ಕಮರಡಿ ಗ್ರಾಮಸ್ಥರು ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.