ADVERTISEMENT

ಕೊರೊನಾ: 5 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 2:32 IST
Last Updated 21 ಜನವರಿ 2021, 2:32 IST

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 16 ಜನರಿಗೆ ಕೊರೊನಾ ಸೋಂಕು ತಗುಲಿದೆ. 5 ಮಂದಿ ಗುಣಮುಖರಾಗಿದ್ದಾರೆ.

1950 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಹಿಂದಿನ ದಿನಗಳ ಪರೀಕ್ಷಾ ವರದಿಯೂ ಸೇರಿ 2028 ಮಂದಿಯ ವರದಿ ನೆಗೆಟಿವ್ ಬಂದಿದೆ.

ಮನೆಗಳಲ್ಲಿ 43 ಸೇರಿ ಒಟ್ಟು 85 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌ನಿಂದ 349 ಜನರು ಮೃತಪಟ್ಟಿದ್ದಾರೆ.

ADVERTISEMENT

ಶಿವಮೊಗ್ಗ ತಾಲ್ಲೂಕಿನಲ್ಲಿ 8, ಭದ್ರಾವತಿಯಲ್ಲಿ 2, ತೀರ್ಥಹಳ್ಳಿಯಲ್ಲಿ 2, ಶಿಕಾರಿಪುರ, ಸೊರಬ, ಸಾಗರ, ಹೊಸನಗರದಲ್ಲಿ ತಲಾ ಒಬ್ಬರಿಗೆ ಕೋವಿಡ್‌ ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.