ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಐಸಿಯು ವಾರ್ಡ್ ಮರಣ ಪ್ರಮಾಣ ಶೇ 50ಕ್ಕಿಂತ ಹೆಚ್ಚಿದೆ. ಸಾವಿನ ಪ್ರಮಾಣ ತಗ್ಗಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಸೂಚಿಸಿದರು.
ಮೆಗ್ಗಾನ್ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿದ ನಂತರ ಅವರು ಮಾತನಾಡಿದರು.
ಕೋವಿಡ್ ಒಳರೋಗಿಗಳ ಸಾವಿನ ಪರಿಶೀಲನೆಗಾಗಿ ಬೆಂಗಳೂರಿನಿಂದ ತಜ್ಞರ ತಂಡ ಕಳುಹಿಸಲಾಗುವುದು. ಎಲ್ಲಾ ಐಸಿಯು ವಾರ್ಡ್ಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಸಬೇಕು. ಆಸ್ಪತ್ರೆಗಳಲ್ಲಿ ನೆಪಕ್ಕೆ ಬಯೊಮೆಟ್ರಿಕ್ ನೀಡಿ, ನಂತರ ಖಾಸಗಿ ಆಸ್ಪತ್ರೆಗಳಿಗೆ ತೆರಳುವ ವೈದ್ಯರ ಕಳ್ಳಾಟ ತಡೆಗೆ ವೈದ್ಯಕೀಯ ಕಾಲೇಜು, ಬೋಧನಾ ಆಸ್ಪತ್ರೆಗಳಲ್ಲಿ ಜಿಯೋ ಫೆನ್ಸಿಂಗ್ ವ್ಯವಸ್ಥೆ ಮಾಡಬೇಕು ಎಂದು ತಾಕೀತು ಮಾಡಿದರು.
ವೈದ್ಯರಿಗೆ ಲಕ್ಷಾಂತರ ರೂಪಾಯಿ ವೇತನ ನೀಡಲಾಗುತ್ತಿದೆ. ಅಷ್ಟೊಂದು ಸೌಲಭ್ಯ ಪಡೆದ ನಂತರವೂ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವುದು ತಪ್ಪು. ಇದು ನೈತಿಕತೆಯ ಪ್ರಶ್ನೆ. ಜಿಯೋ ಫೆನ್ಸಿಂಗ್ ಸಿಮ್ ಅಳವಡಿಸಿದರೆ 100 ಮೀಟರ್ ಹೊರಹೋಗುವ ವೈದ್ಯರ ವಿವರ ದೊರಕಲಿದೆ. ಆಗ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲು ಸುಲಭವಾಗಲಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.