ಶಿವಮೊಗ್ಗ: ಇಲ್ಲಿನ ಹಾಯ್ಹೊಳೆ ಸಮೀಪ ತುಂಗಾ ನದಿ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ಪಾಲಿಕೆ ಸದಸ್ಯೆ ಆರತಿ ಪ್ರಕಾಶ್ ಅವರ ಪುತ್ರ ಪ್ರತೀಶ್ (24) ಶವವಾಗಿ ಶನಿವಾರ ಪತ್ತೆಯಾಗಿದ್ದಾನೆ.
ಪ್ರತೀಶ್ ಸ್ನೇಹಿತರೊಂದಿಗೆ ಶುಕ್ರವಾರ ಹುಟ್ಟುಹಬ್ಬ ಆಚರಿಸಲು ತುಂಗಾ ನದಿ ಚಾನಲ್ ಬಳಿ ತೆರಳಿದ್ದರು. ಆಗ ಆಯತಪ್ಪಿ ಚಾನಲ್ಗೆ ಬಿದ್ದು ಕೊಚ್ಚಿ ಹೋಗಿದ್ದರು.
ಅಗ್ನಿಶಾಮಕ ತಂಡ, ವಿಪತ್ತು ನಿರ್ವಹಣಾ ತಂಡದಿಂದ ಶೋಧ ಕಾರ್ಯ ನಡೆದಿತ್ತು. ಶನಿವಾರ ಚಾನಲ್ನಲ್ಲಿ ಪ್ರತೀಶ್ ಮೃತದೇಹ ಪತ್ತೆಯಾಗಿದೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.