ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಸೊಪ್ಪುಗುಡ್ಡೆ ವಾಸಿಗಳಾದ ಪಾರ್ಥಸಾರಥಿ ಹಾಗೂ ಅವರ ಪತ್ನಿ ಚಂದ್ರಮ್ಮ ಎಂಬುವರು ಸಾವಿನಲ್ಲೂ ಒಂದಾಗಿದ್ದಾರೆ.
ಪತ್ನಿ ಚಂದ್ರಮ್ಮ(67) ಅನಾರೋಗ್ಯ ಕಾರಣ ನಿಧನರಾಗಿದ್ದು, ಪತ್ನಿಯ ಸಾವಿನ ಸುದ್ದಿ ತಿಳಿದು ಪತಿ ಪಾರ್ಥಸಾರಥಿ(88) ಅವರು ಹೃದಯಾಘಾತದಿಂದ ನಿಧನರಾದರು. ಬಿಎಸ್ಎಲ್ಎನ್ ಸಂಸ್ಥೆಯ ನಿವೃತ್ತ ನೌಕರರಾದ ಇವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಸ್ವಗ್ರಾಮದಲ್ಲಿ ಇವರ ಅಂತ್ಯ ಸಂಸ್ಕಾರವನ್ನು ಒಟ್ಟಿಗೆ ನೆರವೇರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.