ADVERTISEMENT

ಬಂಧಿತರು ಇನ್ನೂ ನಾಲ್ಕು ದಿನ ಪೊಲೀಸ್ ವಶಕ್ಕೆ

ನಿಷೇಧಿತ ಭಯೋತ್ಪಾದಕ ಸಂಘಟನೆಯ ಜೊತೆ ನಂಟು ಆರೋಪ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 4:33 IST
Last Updated 27 ಸೆಪ್ಟೆಂಬರ್ 2022, 4:33 IST

ಶಿವಮೊಗ್ಗ: ನಿಷೇಧಿತ ಭಯೋತ್ಪಾದಕ ಸಂಘಟನೆಯ ಜೊತೆ ನಂಟು ಆರೋಪದ ಮೇಲೆ ಬಂಧಿಸಲಾಗಿರುವ ಮಾಝ್ ಮುನೀರ್ ಅಹಮದ್ ಹಾಗೂ ಮೊಹಮ್ಮದ್ ಯಾಸೀನ್ ಅವರ ಪೊಲೀಸ್ ಕಸ್ಟಡಿ ಅವಧಿಯನ್ನು ನಾಲ್ಕು ದಿನ ವಿಸ್ತರಿಸಲಾಗಿದೆ.

ಇಲ್ಲಿನ ಗ್ರಾಮೀಣ ಠಾಣೆ ‍ಪೊಲೀಸರು ಸೋಮವಾರ ಆರೋಪಿಗಳನ್ನು ಇಲ್ಲಿನ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ಪೊಲೀಸರ ಮನವಿ ಪುರಸ್ಕರಿದ ನ್ಯಾಯಾಲಯ ವಿಚಾರಣೆಗಾಗಿ ಆರೋಪಿಗಳನ್ನು ಸೆಪ್ಟೆಂಬರ್ 30ರವರೆಗೆ ಪೊಲೀಸರ ವಶಕ್ಕೆ ನೀಡಿತು. ಇದಕ್ಕೂ ಮುನ್ನ ಆರೋಪಿಗಳನ್ನು ಪೊಲೀಸರು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ಮಾಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT