ಶಿವಮೊಗ್ಗ: ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಎರಡುಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುತ್ತಾರೆ.ಅಕಸ್ಮಾತ್ ನಿಖಿಲ್ ಸೋತರೆ ರಾಜಕೀಯದಿಂದ ನಿವೃತ್ತಿಹೊಂದುತ್ತೇನೆಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.
ಬಿ.ಎಸ್.ಯಡಿಯೂರಪ್ಪ ಅವರು ಮಂಡ್ಯ ಜಿಲ್ಲೆಯ ಸುಪುತ್ರ. ಆದರೂ,ಅವರಿಗೆ ಮಂಡ್ಯ ಗಡಿ ಪ್ರವೇಶ ಮಾಡಲು ಸಾಧ್ಯವಾಗಿಲ್ಲ. ಚಾಮರಾಜನಗರ, ಮೈಸೂರಿನಲ್ಲಿ ನಿಂತು ಮೋದಿ, ಯಡಿಯೂರಪ್ಪ ಸುಮಲತಾ ಪರವಾಗಿ ಪ್ರಚಾರ ಮಾಡಿದ್ದಾರೆ.ಒಂದು ರಾಷ್ಟ್ರೀಯ ಪಕ್ಷವಾಗಿದ್ದರೂ ಮಂಡ್ಯದಲ್ಲಿ ಅಭ್ಯರ್ಥಿ ಹಾಕಲಾಗದ ಹೀನಾಯ ಸ್ಥಿತಿ ಬಿಜೆಪಿಗೆ ಬರಬಾರದಾಗಿತ್ತು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಛೇಡಿಸಿದರು.
ಸುಮಲತಾ ಸಿನಿಮಾದಲ್ಲಿ ಹೇಗೆ ನಟನೆ ಮಾಡಿದ್ದಾರೋ, ಇಲ್ಲವೋ ಗೊತ್ತಿಲ್ಲ. ಈ ಚುನಾವಣೆಯಲ್ಲಿ ಉತ್ತಮ ನಟನೆ ಮಾಡಿದ್ದಾರೆ. ಅವರ ನಟನೆಗೆ ಮಂಡ್ಯ ಜನರು ಮರಳಾಗುವುದಿಲ್ಲ. ಚೆಲುವರಾಯಸ್ವಾಮಿ ಯಾರ ಪರವಾಗಿ ಕೆಲಸ ಮಾಡಿದ್ದಾರೋ, ಅವರೆಲ್ಲರೂ ಸೋತಿದ್ದಾರೆ. ಅದೇ ರೀತಿ ಸುಮಲತಾ ಕೂಡ ಸೋಲಲಿದ್ದಾರೆ ಎಂದು ಭವಿಷ್ಯ ನುಡಿದರು.
ಆದಾಯ ತೆರಿಗೆ ಇಲಾಖೆಬಿಜೆಪಿ ಸಂಸ್ಥೆಯಾಗಿಬದಲಾಗಿದೆ.ಐಟಿಅಧಿಕಾರಿಗಳು ಬಿಜೆಪಿಯ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.