ಆನವಟ್ಟಿ: ಸಮೀಪದ ಬಂಕಸಾಣ–ಮೂಗುರು ಗ್ರಾಮದ ಬಳಿ ವರದಾ ನದಿಯಲ್ಲಿ ಶವಯೊಂದು ಪತ್ತೆಯಾಗಿದೆ.
ಶವ ತೇಲುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
‘ವಾರದ ಹಿಂದೆ ವ್ಯಕ್ತಿ ನದಿಯಲ್ಲಿ ಬಿದ್ದಿರುವ ಸಾಧ್ಯತೆ ಇದೆ. ಈಗ ನೀರಿನ ಹರಿವು ಕಡಿಮೆಯಾಗಿರುವುದರಿಂದ ಶವ ಪತ್ತೆಯಾಗಿದೆ. ವ್ಯಕ್ತಿಯ ಕೈಲ್ಲಿ ಹೃದಯ ಗುರುತಿನ ಹಚ್ಚೆ ಇದ್ದು, ಅದರ ಒಳಗೆ ಆರ್.ವಿ ಅಕ್ಷರ ಬರೆಯಲಾಗಿದೆ. ಗುರುತು ಪತ್ತೆಯಾಗಿಲ್ಲ. ಗುರುತು ಇದ್ದವರು ಪೊಲೀಸ್ ಠಾಣೆ ಸಂಪರ್ಕಿಸಬಹುದು’ ಎಂದು ಆನವಟ್ಟಿ ಠಾಣೆಯ ಪಿಎಸ್ಐ ರಾಜು ರೆಡ್ಡಿ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.