ಉಳ್ಳಾಲ: ಕೆರೆ ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊ ಬ್ಬರು ಮಂಗಳವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನಾರ್ಲಪಡೀಲು ನಿವಾಸಿ ರಾಜೇಶ್ ಶೆಟ್ಟಿ (55) ಮೃತ ವ್ಯಕ್ತಿ. ತಲಪಾಡಿ ಟೋಲ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜೇಶ್ ಎಂದಿನಂತೆ ಕಲ್ಲಿನ ಕೋರೆಯಲ್ಲಿ ಈಜಲು ತೆರಳಿದ್ದರು. ಮಂಗಳವಾರ ಈಜಲು ಹೋದಾಗ ಮುಳುಗಿ ಮೃತಪಟ್ಟಿದ್ದಾರೆ. ಕೂಡಲೇ ಸ್ಥಳೀಯರು ರಕ್ಷಿಸಲು ಮುಂದಾದರೂ ಪ್ರಯತ್ನ ಫಲ ಕೊಡಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.