ADVERTISEMENT

ಶಿವಮೊಗ್ಗ | ಸಾಲ ಬಾಧೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 13:11 IST
Last Updated 3 ಆಗಸ್ಟ್ 2020, 13:11 IST
   

ಶಿವಮೊಗ್ಗ: ಸಾಲದ ಸುಳಿಗೆ ಸಿಲುಕಿದ್ದ ಪುರದಾಳು ಗ್ರಾಮದ ರೈತ ಪದ್ಮಪ್ಪ (65) ಸೋಮವಾರ ತುಂಬಿ ಹರಿಯುತ್ತಿದ್ದ ಬಾರೆ ಹಳ್ಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರ್ಪೊರೇಷನ್ ಬ್ಯಾಂಕ್‌ನಲ್ಲಿ ₹ 3.50 ಲಕ್ಷ ಸಾಲ ಮಾಡಿದ್ದರು. ಕೊರೊನಾ ಸಂಕಷ್ಟದ ಮಧ್ಯೆಯೂ ಬ್ಯಾಂಕ್ ಅಧಿಕಾರಿಗಳು ಸಾಲ ಕಟ್ಟುವಂತೆ ಫೋನ್ ಕರೆ ಮಾಡಿದ್ದರು. ಸಾಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಸದಸ್ಯರು ತುಂಗಾ ನಗರ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ಅವರಿಗೆ ನಾಲ್ಕು ಎಕರೆ ಜಮೀನು ಇದೆ. ಇಬ್ಬರು ಮಕ್ಕಳು ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.