ADVERTISEMENT

ಸಾಗರ | ಒಡೆದು ಹೋಗಿರುವ ಮ್ಯಾನ್‌ಹೋಲ್‌ಗಳ ದುರಸ್ತಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2023, 13:46 IST
Last Updated 8 ಆಗಸ್ಟ್ 2023, 13:46 IST
ಸಾಗರದ ಮಾರ್ಕೆಟ್ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿಯ ಮ್ಯಾನ್ ಹೋಲ್ ಮಳೆ ನೀರಿನ ರಭಸಕ್ಕೆ ಒಡೆದು ಹೋಗಿದೆ.
ಸಾಗರದ ಮಾರ್ಕೆಟ್ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿಯ ಮ್ಯಾನ್ ಹೋಲ್ ಮಳೆ ನೀರಿನ ರಭಸಕ್ಕೆ ಒಡೆದು ಹೋಗಿದೆ.   

ಸಾಗರ: ನಗರವ್ಯಾಪ್ತಿಯ ಮಾರ್ಕೆಟ್ ರಸ್ತೆಯ ಕೋಮಲ್ ಬೇಕರಿ ಎದುರು ಒಳಚರಂಡಿ ಕಾಮಗಾರಿಗಾಗಿ ತೆಗೆಯಲಾಗಿದ್ದ ಮ್ಯಾನ್ ಹೋಲ್ ಮಳೆಯ ನೀರಿನ ರಭಸಕ್ಕೆ ಒಡೆದು ಹೋಗಿದೆ.

ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿದ್ದು, ಅಪಾಯ ಉಂಟಾಗುವ ಸಾಧ್ಯತೆ ಇದೆ. ಮ್ಯಾನ್ ಹೋಲ್ ವಾಹನ ಸವಾರರಿಗೆ ಕಾಣಲಿ ಎಂದು ಸ್ಥಳದಲ್ಲಿ ಕೆಂಪು ಬಾವುಟ ನೆಟ್ಟಿದ್ದಾರೆ. ಆದರೆ, ರಾತ್ರಿ ವೇಳೆ ಇದು ಕಾಣಿಸದೆ ಅನಾಹುತ ಉಂಟಾಗುವ ಸಾಧ್ಯತೆ ಇದ್ದು ಅಧಿಕಾರಿಗಳು ಕೂಡಲೇ ಇದನ್ನು ದುರಸ್ತಿಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT