ADVERTISEMENT

ಸ್ಥಳೀಯ ಸಂಸ್ಥೆಗಳಲ್ಲೂ ಪ್ರಜಾಪ್ರಭುತ್ವದ ಕಗ್ಗೊಲೆ: ಸಿದ್ದರಾಮಯ್ಯ ಆರೋಪ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 12:00 IST
Last Updated 8 ನವೆಂಬರ್ 2020, 12:00 IST

ಶಿವಮೊಗ್ಗ: ರಾಜ್ಯದಲ್ಲಿ ನಡೆಸಿದ ಆಪರೇಷನ್ ಕಮಲದ ಪ್ರಯೋಗವನ್ನು ಈಗ ಸ್ಥಳೀಯ ಸಂಸ್ಥೆಗಳಲ್ಲೂ ಅನುಸರಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದರು.

ನಗರದಲ್ಲಿ ಭಾನುವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪರೇಷನ್ ಕಮಲದ ಜನಕ. ಅವರ ತವರು ಕ್ಷೇತ್ರ ಶಿಕಾರಿಪುರ ಪುರಸಭೆಯನ್ನೂ ಬಿಟ್ಟಿಲ್ಲ. ಯಡಿಯೂರಪ್ಪ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರ ತಾಂಡವಾಡುತ್ತಿದೆ. ರಾಜ್ಯ ಬಿಜೆಪಿಯಲ್ಲಿ ಸದ್ಯ ಮೂರು ಬಣಗಳಿವೆ.ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲೂ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ. ಈ ಕುರಿತು ತಮಗೆ ಖಚಿತ ಮಾಹಿತಿ ದೊರೆತಿದೆ ಎಂದರು.

ADVERTISEMENT

ಶಿರಾ ಮತ್ತು ಆರ್‌ಆರ್ ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಚುನಾವಣಾ ಸಮೀಕ್ಷೆಗಳು ಉಲ್ಟಾ ಆಗಲಿವೆ. ನಾಲ್ಕು ದಿನಗಳು ಪ್ರಚಾರದಲ್ಲಿ ಭಾಗವಿಸಿದ್ದೆ. ಮತದಾರರು ಕಾಂಗ್ರೆಸ್ ಪರ ಇದ್ದಾರೆ ಎನ್ನುವುದು ಖಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೈವಾಡವಿದೆ. ಕೇಂದ್ರ ಸರ್ಕಾರ ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.