ಶಿವಮೊಗ್ಗ : ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯಲ್ಲಿ ಶಿವಮೊಗ್ಗದ ದೇಶ್ ನೀಟ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಲ್ಲಿ 45 ಮಂದಿ ಉನ್ನತ ಕೋರ್ಸ್ಗಳಿಗೆ ಪ್ರವೇಶಾವಕಾಶ ಪಡೆಯಲಿದ್ದಾರೆ ಎಂದು ಅಕಾಡೆಮಿ ವ್ಯವಸ್ಥಾಪಕ ನಿರ್ದೇಶಕ ಎ.ಆರ್. ಅವಿನಾಶ್ ತಿಳಿಸಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಆರಂಭವಾದ ಅಕಾಡೆಮಿಯಲ್ಲಿ 150 ವಿದ್ಯಾರ್ಥಿಗಳು 10 ತಿಂಗಳ ತರಬೇತಿ ಪಡೆದಿದ್ದು, ಪ್ರಥಮ ಬ್ಯಾಚ್ನಲ್ಲಿ ಪರೀಕ್ಷೆಗೆ ಹಾಜರಾಗಿದ್ದವರಲ್ಲಿ 35 ವಿದ್ಯಾರ್ಥಿಗಳು ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು, ಉಳಿದ 10 ವಿದ್ಯಾರ್ಥಿಗಳು ದಂತ ಹಾಗೂ ಆಯುರ್ವೇದ ಕಾಲೇಜುಗಳಲ್ಲಿ ಪ್ರವೇಶಕ್ಕೆ ಅವಕಾಶ ಪಡೆಯಲಿದ್ದಾರೆ ಎಂದರು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ನೀಟ್ ಪರೀಕ್ಷೆ ಅತ್ಯಂತ ಕಠಿಣವಾಗಿತ್ತು. ಹಾಗಾಗಿ ಒಟ್ಟು ಫಲಿತಾಂಶ ಸಾಕಷ್ಟು ಕಡಿಮೆಯಾಗಿದೆ. ಆದರೂ ಕೂಡ ಈ ವರ್ಷದಲ್ಲಿ ಮೆಡಿಕಲ್ ಸೀಟುಗಳ ಸಂಖ್ಯೆ ಹೆಚ್ಚು ಮಾಡಿರುವುದರಿಂದ ಕಡಿಮೆ ಅಂಕ ಪಡೆದವರಿಗೂ ಕೂಡ ಮೆಡಿಕಲ್ ಕೋರ್ಸ್ಗಳಿಗೆ ಸೀಟು ಸಿಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ 900 ಮೆಡಿಕಲ್ ಸೀಟುಗಳು ಹೆಚ್ಚಳವಾಗಿವೆ ಎಂದರು.
ದೇಶ್ ನೀಟ್ ಅಕಾಡೆಮಿಯು ವೈದ್ಯರಾಗುವ ಕನಸುಗಳನ್ನು ನನಸು ಮಾಡುವತ್ತ ಹೆಜ್ಜೆ ಹಾಕುತ್ತಿದೆ. ಹಾಗಾಗಿ ಇಲ್ಲಿಯೇ ಹಾಸ್ಟೇಲ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಶಿವಮೊಗ್ಗದ ಬಡ ವಿದ್ಯಾರ್ಥಿಗಳಿಗೆ ಹಾಸ್ಟೇಲ್ ಪ್ರವೇಶಕ್ಕೆ ಶೇ.50ರಷ್ಟು ಕೂಡ ರಿಯಾಯಿತಿ ನೀಡಲಾಗುವುದು. ಅತ್ಯಂತ ಬಡ ಮಕ್ಕಳಿಗೆ ಶುಲ್ಕದಲ್ಲಿ ರಿಯಾಯಿತಿ ಕೂಡ ನೀಡಲಾಗುವುದು ಎಂದರು.
ವಿದ್ಯಾರ್ಥಿಗಳು ಸಾಧನೆ ಮಾಡಲು ಶ್ರಮಿಸಿದ ಅಕಾಡೆಮಿಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಅಭಿನಂದನೆ ಸಲ್ಲಿಸಿದರು. 2026ನೇ ಸಾಲಿನ ಹೊಸ ಬ್ಯಾಚ್ಗೆ ಪ್ರವೇಶ ಆರಂಭವಾಗಿದ್ದು, ಶಿವಮೊಗ್ಗ ಮತ್ತು ಅಕ್ಕ-ಪಕ್ಕದ ಜಿಲ್ಲೆಗಳ ವಿದ್ಯಾರ್ಥಿಗಳು ಈ ಸದಾವಕಾಶ ಪಡೆಯುವಂತೆ ಮನವಿ ಮಾಡಿಕೊಂಡರು.
ಪ್ರವೇಶಾತಿ ಅಥವಾ ಹೆಚ್ಚಿನ ಮಾಹಿತಿಗಾಗಿ ಮೊ.: 96638-61713, 70192-55688ರಲ್ಲಿ ಸಂಪರ್ಕಿಸಬಹುದಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕ್ಯಾಂಪಸ್ ಕೋ-ಆರ್ಡಿನೇಟರ್ ವಿಜಯ್, ಜನರಲ್ ಮ್ಯಾನೇಜರ್ ಪ್ರದೀಪ್, ನಾಗರಾಜ್ ಆಚಾರಿ, ಡಿಸಿಲ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.