ಶಿವಮೊಗ್ಗ: ಇಲ್ಲಿನ ವಿನೋಬನಗರ 2ನೇ ಹಂತದಲ್ಲಿ ಮಂಗಳವಾರ ವಾಹನ ತಪಾಸಣೆ ವೇಳೆ ಬೈಕ್ ಸವಾರರ ಬಳಿ ಮಾರಾಕಾಸ್ತ್ರಗಳು ಪತ್ತೆಯಾಗಿದ್ದು, ಇಬ್ಬರನ್ನು ವಿನೋಬನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಂಗಾನಗರದ ಪ್ರವೀಣ್ ಮತ್ತು ತರಿಕೆರೆಯ ಸಂತೋಷ್ ಬಂಧಿತರು. ಪಲ್ಸರ್ ಬೈಕಿನಲ್ಲಿ ಬಂದಿದ್ದ ಇವರನ್ನು ಪೊಲೀಸರು ತಡೆದಿದ್ದಾರೆ. ತಪಾಸಣೆಗೂ ಮುನ್ನ ವಿಚಾರಣೆ ಮಾಡುತ್ತಿದ್ದಂತೆ ಈ ಇಬ್ಬರು ಪರಾರಿಯಾಗಲು ಯತ್ನಿಸಿದ್ದಾರೆ. ಅವರನ್ನು ಹಿಡಿದು ಪರಿಶೀಲಿಸಿದಾಗ ಅವರ ಬಳಿ ಮಾರಾಕಾಸ್ತ್ರಗಳು ಪತ್ತೆಯಾಗಿವೆ. ಈ ಸಂಬಂಧ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.