ಸಚಿವ ಮಧು ಬಂಗಾರಪ್ಪ.
ಆನವಟ್ಟಿ: ‘ಧರ್ಮಸ್ಥಳ ಕ್ಷೇತ್ರದ ಬಗ್ಗೆ ಹಾಗೂ ವೀರೇಂದ್ರ ಹೆಗ್ಗಡೆ ಅವರ ಮೇಲೆ ನನಗೆ ವೈಯಕ್ತಿಕವಾಗಿ ವಿಶೇಷ ಗೌರವವಿದೆ. ಅಲ್ಲಿ ಈಗ ನಡೆಯುತ್ತಿರುವ ಘಟನೆಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕಾನೂನು ರೀತಿಯಲ್ಲಿ ತನಿಖೆ ನಡೆಯುತ್ತಿದೆ’ ಎಂದು ಸಚಿವ ಮಧು ಬಂಗಾರಪ್ಪ ಶುಕ್ರವಾರ ಮಾಧ್ಯಮದವರಿಗೆ ತಿಳಿಸಿದರು.
‘ಸರ್ಕಾರ ಧರ್ಮಸ್ಥಳದ ಬಗ್ಗೆ ಕೇಳಿಬಂದ ಆರೋಪದ ಬಗ್ಗೆ ತನಿಖೆ ಮಾಡಿದರೂ ಜನ ಮಾತನಾಡುತ್ತಾರೆ. ತನಿಖೆ ಮಾಡದೆ ಇದ್ದರೂ ಜನ ಮಾತನಾಡುತ್ತಾರೆ. ಆದ್ದರಿಂದ ಈ ವಿಚಾರದ ಬಗ್ಗೆ ಹೆಚ್ಚು ಚರ್ಚೆ ಮಾಡದೆ ಇರುವುದೇ ಒಳ್ಳೆಯದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.