ADVERTISEMENT

ಶಿವಕುಮಾರ್ ಗೂಂಡಾ, ಸಿದ್ದರಾಮಯ್ಯ ಜಾತಿವಾದಿ: ಈಶ್ವರಪ್ಪ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2022, 3:20 IST
Last Updated 20 ಫೆಬ್ರುವರಿ 2022, 3:20 IST
ಕೆ.ಎಸ್‌.ಈಶ್ವರಪ್ಪ
ಕೆ.ಎಸ್‌.ಈಶ್ವರಪ್ಪ   

ಶಿವಮೊಗ್ಗ: ‘ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡಿದರೆ ಗೂಂಡಾ ಡಿ.ಕೆ.ಶಿವಕುಮಾರ್, ಜಾತಿವಾದಿ ಸಿದ್ದರಾಮಯ್ಯ ಬಂದರೂ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಶನಿವಾರ ಭದ್ರಾವತಿ ಕ್ಷೇತ್ರದ ಜೆಡಿಎಸ್‌ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು,‘ಜಾತಿ ಕುಲದ ಲೆಕ್ಕಾಚಾರ ಬದಿಗಿಟ್ಟು ಕೆಲಸ ಮಾಡಬೇಕು.ಲಿಂಗಾಯತರು, ಒಕ್ಕಲಿಗರು ಎನ್ನುತ್ತಾ ಜಾತಿಯ ಲೆಕ್ಕಾಚಾರಕ್ಕೆ ಅವಕಾಶ ಮಾಡಿಕೊಡಬಾರದು’ ಎಂದು ಹೇಳಿದರು.

‘ಎಲ್ಲರೂ ಹಿಂದೂಗಳು, ಹಿಂದುತ್ವ ಗೆಲ್ಲಿಸುತ್ತೇವೆ ಎನ್ನುಬೇಕು. ರಾಷ್ಟ್ರೀಯ ವಿಚಾರಗಳನ್ನು ಇಟ್ಟುಕೊಂಡೇ ಸದಾ ಮುನ್ನಡೆಯಬೇಕು. ಆಗ ಜನರೇ ಗೂಂಡಾ, ಜಾತಿವಾದಿಗಳನ್ನು ಪಕ್ಕಕ್ಕೆ ಸರಿಸುತ್ತಾರೆ’ ಎಂದು ಕರೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.