ADVERTISEMENT

ನ್ಯೂನತೆ ಮಧ್ಯೆಯೂ ಕರ್ತವ್ಯ ಪ್ರಜ್ಞೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2019, 14:36 IST
Last Updated 17 ಏಪ್ರಿಲ್ 2019, 14:36 IST
ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ ಜತೆ ಸುಬ್ರಹ್ಮಣ್ಯ ಶಾಸ್ತ್ರಿ
ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ ಜತೆ ಸುಬ್ರಹ್ಮಣ್ಯ ಶಾಸ್ತ್ರಿ   

ಶಿವಮೊಗ್ಗ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಹಲವರು ವಿವಿಧ ಸಬೂಬು ಹೇಳಿ ತಪ್ಪಿಸಿಕೊಳ್ಳುವುದು ಸಾಮಾನ್ಯ ಸಂಗತಿ. ಆದರೆ, ಕರ್ನಾಟಕ ಗ್ರಾಮೀಣ ಬ್ಯಾಂಕ್‌ ತೀರ್ಥಹಳ್ಳಿ ತಾಲ್ಲೂಕು ಕನ್ನಂಗಿ ಶಾಖೆಯ ಸಹಾಯಕ ವ್ಯವಸ್ಥಾಪಕ ಸುಬ್ರಹ್ಮಣ್ಯ ಶಾಸ್ತ್ರಿ ಅದಕ್ಕೆ ಅಪವಾದ.

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಅವರು ಮೈಕ್ರೊ ಅಬ್ಸರ್ವರ್ ಆಗಿ ನೇಮಕಗೊಂಡಿದ್ದಾರೆ.

ಕೆಲವು ವರ್ಷಗಳ ಹಿಂದೆ ಅಪಘಾತವಾಗಿ ಅವರ ಎರಡೂ ಕಾಲುಗಳಿಗೆ ರಾಡ್‌ ಹಾಕಲಾಗಿದೆ. ಊರುಗೋಲು ಸಹಾಯದಿಂದ ನಡೆದಾಡುತ್ತಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಚುನಾವಣಾ ತರಬೇತಿಗೆ ಬಂದಿದ್ದ ಅವರ ಸ್ಥಿತಿ ಗಮನಿಸಿದ ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ ಅವರು ಚುನಾವಣಾ ಕರ್ತವ್ಯದಿಂದ ಬಿಡುಗಡೆ ಮಾಡಲು ಮುಂದಾದರು. ಅವರ ಕಾಳಜಿಯನ್ನು ನಯವಾಗಿ ತಿರಸ್ಕರಿಸಿದ ಶಾಸ್ತ್ರಿ ಅವರು ‘ನಿತ್ಯವೂ ನನ್ನದು ಇದೆ ಸಮಸ್ಯೆ. ಎಷ್ಟೇ ಶ್ರಮವಾದರೂ ಪರವಾಗಿಲ್ಲ. ಕರ್ತವ್ಯದಿಂದ ವಿಮುಖನಾಗುವುದಿಲ್ಲ. ಕೆಲಸಕ್ಕೆ ಸೇರಿದ ದಿನದಿಂದಲೂ ಪ್ರತಿ ಚುನಾವಣೆಯಲ್ಲೂ ತಪ್ಪದೆ ಭಾಗಿಯಾಗುತ್ತಾ ಬಂದಿದ್ದೇನೆ’ ಎಂದು ಹೇಳುತ್ತಾ ಸಹೋದ್ಯೋಗಿ ನಗರ ಗುರುದೇವ್ ಭಂಡಾರ್ಕರ್ ಅವರ ಜತೆ ತರಬೇತಿ ಕೊಠಡಿಯತ್ತ ಹೆಜ್ಜೆ ಹಾಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.