ಶಿವಮೊಗ್ಗ:ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಹಮದ್ ಯೂಸುಫ್ ಖಾನ್ ನಾಪತ್ತೆಯಾಗಿದ್ದಾರೆ ಎಂದು ಅವರ ಪುತ್ರ ರೆಹಮಾನ್ ಇಲ್ಲಿನ ತುಂಗಾನಗರ ಠಾಣೆಗೆ ಗುರುವಾರ ದೂರು ನೀಡಿದ್ದಾರೆ.
ಊರುಗಡೂರಿನ ಮನೆಯಿಂದ ಬುಧವಾರ ರಾತ್ರಿ ಹೊರಗೆ ಹೋದವರು ಮರಳಿ ಬಂದಿಲ್ಲ. ಎಲ್ಲ ಕಡೆ ಹುಡುಕಿದರೂ ಸುಳಿವು ದೊರೆತಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿ ಯೂಸುಫ್ ಖಾನ್ ಅವರಿಗೆ ಈ ಬಾರಿ ಡೀಸೆಲ್ ಪಂಪ್ ಚಿಹ್ನೆ ದೊರೆತಿತ್ತು. ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ಅವರು ಚುನಾವಣಾ ಪ್ರಚಾರ ಕೈಗೊಂಡಿದ್ದರು. ಶಿವಮೊಗ್ಗ ಕ್ಷೇತ್ರಕ್ಕೆ ಏ. 23ರಂದು ಮತದಾನ ನಡೆಯಲಿದೆ. ಬಹಿರಂಗ ಪ್ರಚಾರ ಅಂತ್ಯಕ್ಕೆ ಮೂರು ದಿನ ಬಾಕಿ ಇರುವಾಗ ಈ ಘಟನೆ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.