ಶಿವಮೊಗ್ಗ: ನಗರ ಪಾಲಿಕೆ ಕಂದಾಯ ವಿಭಾಗದ ಸಹಾಯಕ ಎಂಜಿನಿಯರ್ ಹಾಲೇಶಪ್ಪ ಅವರು ಸೋಮವಾರ ಎಸಿಬಿ ಬಲೆಗೆ ಬಿದಿದ್ದಾರೆ.
ಗಾಂಧಿನಗರದ ಪಿ.ವೆಂಕಟೇಶ್ ಶೆಟ್ಟಿ ಅವರ ವಾಸದ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತನೆ ಮಾಡಿಕೊಡಲು ₨ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ವೆಂಕಟೇಶ್ ಅವರು ಈ ವಿಷಯವನ್ನು ಭ್ರಷ್ಟಾಚಾರ ನಿಗ್ರಹ ದಳದ ಗಮನಕ್ಕೆ ತಂದಿದ್ದರು. ಸೋಮವಾರ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ಅವರನ್ನು ಬಂಧಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.