ADVERTISEMENT

ಸಾಗರ| ಮೋಸದ ಕರೆ: ₹ 3.48 ಲಕ್ಷ ವಂಚನೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 5:41 IST
Last Updated 20 ಫೆಬ್ರುವರಿ 2023, 5:41 IST

ಸಾಗರ: ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿಯೊಬ್ಬರು ಒಟಿಪಿ ಸಂಖ್ಯೆಯನ್ನು ಪಡೆದು ₹3.48 ಲಕ್ಷ ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ಇಲ್ಲಿನ ಉಷಾ ಎಲೆಕ್ಟ್ರಿಕಲ್ಸ್ ಮಾಲಿಕ ಹರೀಶ್ ಕಾಮತ್ ಅವರಿಗೆ ಐಸಿಐಸಿಐ ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಕರೆ ಮಾಡಿದ್ದಾರೆ. ನಿಮ್ಮ ಎಟಿಎಂ ಕಾರ್ಡ್ ಅಪ್‌ಡೇಟ್ ಮಾಡುವ ಅಗತ್ಯವಿದೆ ಎಂದು ಹೇಳಿ ಅವರ ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದು ಎರಡು ಬಾರಿ ಖಾತೆಯಿಂದ ಒಟ್ಟು ₹ 3.48 ಲಕ್ಷ ತೆಗೆದಿದ್ದಾರೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.