ADVERTISEMENT

ಪ್ರಗತಿಪರ ಸಂಘಟನೆಗಳಿಂದ ಉಪವಾಸ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 13:18 IST
Last Updated 2 ಅಕ್ಟೋಬರ್ 2020, 13:18 IST
ಶಿವಮೊಗ್ಗದಲ್ಲಿ ಶುಕ್ರವಾರ ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ಜನಶಕ್ತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಕೃಷಿ ಮಾರುಕಟ್ಟೆ, ಭೂಸುಧಾರಣೆ, ಭೂಸ್ವಾಧೀನ ತಿದ್ದುಪಡಿ ಮಸೂದೆ ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಿದರು.
ಶಿವಮೊಗ್ಗದಲ್ಲಿ ಶುಕ್ರವಾರ ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ಜನಶಕ್ತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಕೃಷಿ ಮಾರುಕಟ್ಟೆ, ಭೂಸುಧಾರಣೆ, ಭೂಸ್ವಾಧೀನ ತಿದ್ದುಪಡಿ ಮಸೂದೆ ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸಿದರು.   

ಶಿವಮೊಗ್ಗ: ಕೃಷಿ ಮಾರುಕಟ್ಟೆ, ಭೂಸುಧಾರಣೆ, ಭೂಸ್ವಾಧೀನ ತಿದ್ದುಪಡಿ ಮಸೂದೆವಿರೋಧಿಸಿಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ಜನಶಕ್ತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಕಾರ್ಯಕರ್ತರುಶುಕ್ರವಾರ ಗೋಪಿ ವೃತ್ತದಲ್ಲಿಉಪವಾಸ ಸತ್ಯಾಗ್ರಹ ನಡೆಸಿದರು.

ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಕೃಷಿ ಮಾರುಕಟ್ಟೆ, ಕೃಷಿ ಭೂಮಿ ಮತುಭೂ ಸುಧಾರಣೆ, ಭೂ ಸ್ವಾಧೀನ ತಿದ್ದುಪಡಿ ಮಸೂದೆಗಳನ್ನು ಕಾನೂನು ಮಾಡಲು ಹೊರಟಿರುವರಾಜ್ಯ ಸರ್ಕಾರದವಿರುದ್ಧಆಕ್ರೋಶ ವ್ಯಕ್ತಪಡಿಸಿದರು.

ಗಾಂಧಿಕಂಡ ಗ್ರಾಮ ಭಾರತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಶಪಡಿಸುತ್ತಿವೆ. ಕಾರ್ಪೋರೇಟ್ ಕಂಪನಿ ಮತ್ತು ಬಹುರಾಷ್ಟ್ರೀಯಕಂಪನಿಗಳ ರಾಷ್ಟ್ರವಾಗಿ ಪರಿವರ್ತಿಸಲುಹೊರಟಿವೆ. ಸರ್ಕಾರಗಳ ಈತೀರ್ಮಾನ ಕೃಷಿ ವಲಯಕ್ಕೆ ಅಪಾಯಕಾರಿಯಾಗಿದೆ ಎಂದುಕಳವಳ ವ್ಯಕ್ತಪಡಿಸಿದರು.

ADVERTISEMENT

ಇಂತಹ ಕಾನೂನುಗಳಮೂಲಕ ಕಂಪನಿಗಳಿಗೆ ಕೃಷಿ ಮಾರುಕಟ್ಟೆ, ಕೃಷಿ ಭೂಮಿ, ಗ್ರಾಹಕರ ಮಾರುಕಟ್ಟೆ ಜತೆಗೆ ವಿದ್ಯುತ್, ಸಾರಿಗೆ, ರೈಲು, ಬ್ಯಾಂಕ್‌, ಎಲ್‌ಐಸಿ, ಪೆಟ್ರೋಲಿಯಂ ಕಂಪನಿ, ವಿಮಾನ ಬಂದರು, ಸೇವಾ ಕ್ಷೇತ್ರ, ಸರ್ಕಾರಿ ಸ್ವಾಮದ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಿಜ್ಞಾನ ಮತ್ತು ಬಾಹ್ಯಾಕಾಶ ಸಂಸ್ಥೆಗಳನ್ನೂ ಖಾಸಗಿ ಕಂಪನಿಗಳಿಗೆ ನೀಡಲು ಹೊರಟಿದ್ದಾರೆಎಂದು ದೂರಿದರು.

ಭಾರತದ ಹೈನುಗಾರಿಕೆಗೆ ಪೆಟ್ಟು ನೀಡಲಾಗಿದೆ.ಖಾಸಗಿ ಕಂಪನಿಗಳ ಹೈನು ಉದ್ಯಮಕ್ಕೆ ₹ 15 ಸಾವಿರ ಕೋಟಿ ನೆರವು ನೀಡಲು ಮುಂದಾಗಿದೆ. ಗ್ರಾಮೀಣ ಭಾರತದ ಜನರ ಬದುಕು ದಿವಾಳಿಯಾಗಿದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಹಳ್ಳಿಗಳನ್ನು ಬಿಡುವ ಪರಿಸ್ಥಿತಿ ಎದುರಾಗಿದೆ.ದೇಶದಲ್ಲಿ ನಿರುದ್ಯೋಗ ಸಂಖ್ಯೆ ಹೆಚ್ಚಿದೆ. ಆರ್ಥಿಕ ದಿವಾಳಿಯಿಂದ ಜನರ ಬದುಕು ದುರ್ಬಲವಾಗುತ್ತಿದೆ ಎಂದುಆರೋಪಿಸಿದರು.

ಗಾಂಧಿ ಜಯಂತಿ ಆಚರಿಸುವ ನೈತಿಕ ಹಕ್ಕು ರಾಜ್ಯ, ಕೇಂದ್ರ ಸರ್ಕಾರಗಳಿಗಿಲ್ಲ.ಈ ಮಸೂದೆಗಳನ್ನು ಹಿಂಪಡೆಯಬೇಕು. ಆಗ ಮಾತ್ರ ಮುಖ್ಯಮಂತ್ರಿ ಯಡಿಯೂರಪ್ಪಅವರು ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ಅರ್ಥ ಬರುತ್ತದೆ. ಇಲ್ಲದಿದ್ದಲ್ಲಿ ರೈತರಿಗೆ ಬಗೆದ ದ್ರೋಹ ಎಂದು ಚರಿತ್ರೆಯಲ್ಲಿ ದಾಖಲಾಗುತ್ತದೆ. ತಕ್ಷಣ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ವಿವಿಧ ಸಂಘಟನೆಗಳ ಮುಖಂಡರಾದ ಎಚ್.ಆರ್.ಬಸವರಾಜಪ್ಪ, ಕೆ.ಎಲ್.ಅಶೋಕ್, ಹಿಟ್ಟೂರು ರಾಜು, ಡಿ.ಎಸ್.ಶಿವಕುಮಾರ್, ಇ.ಬಿ.ಜಗದೀಶ್, ಎಸ್.ಶಿವಮೂರ್ತಿ, ಪಿ.ಡಿ.ಮಂಜಪ್ಪ, ಡಿ.ಎಚ್.ರಾಮಚಂದ್ರಪ್ಪ, ಕೆ.ರಾಘವೇಂದ್ರ, ಸಿ.ಚಂದ್ರಪ್ಪ, ಜಿ.ವಿ.ರವೀಂದ್ರ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.