ಕೋಣಂದೂರು: ಸಮೀಪದ ದೇಮ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಗದ್ದೆಯಲ್ಲಿ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಮೂರೂವರೆ ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ರಮೇಶ್ ಮತ್ತು ಜಯಲಕ್ಷ್ಮಿ ದಂಪತಿಯ ಮಗು ಅರ್ಥ ಶನಿವಾರ ಸಂಜೆ ಮನೆಯ ಸಮೀಪದ ಅಂಗಳದಲ್ಲಿ ಅಣ್ಣ ದಯಾನಂದ ಜತೆ ಆಟವಾಡುತ್ತಿದ್ದಾಗ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ.
ಅಣ್ಣ ದಯಾನಂದ ಎಷ್ಟೇ ಕೂಗಿದರೂ ಆಕೆ ಹೊರಬರಲಾಗಲಿಲ್ಲ. ಬೆಂಕಿಯ ಜ್ವಾಲೆಯಲ್ಲಿ ಮಗು ಬೆಂದು ಹೋಗಿದೆ. ವಿಷಯ ತಿಳಿದ ಅಕ್ಕಪಕ್ಕದವರು ಸುಮಾರು 500 ಪಿಂಡಿ ಸುಟ್ಟು ಕರಕಲಾದ ಹುಲ್ಲಿನ ಬಣವೆಯಿಂದ ಮಗುವನ್ನು ಹೊರತೆಗೆದಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.