ADVERTISEMENT

ನಾಲ್ವರಿಗೆ ಕೊರೊನಾ 14 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 5:13 IST
Last Updated 12 ಡಿಸೆಂಬರ್ 2020, 5:13 IST

ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ 14 ಜನರು ಗುಣಮುಖರಾಗಿದ್ದು, 4 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

1,538 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದೆ. ಹಿಂದಿನ ದಿನಗಳ ಪರೀಕ್ಷಾ ವರದಿಯೂ ಸೇರಿ 1726 ಮಂದಿಯ ವರದಿ ನೆಗೆಟಿವ್ ಬಂದಿದೆ.

ಮನೆಗಳಲ್ಲಿ 94 ಸೇರಿ ಒಟ್ಟು 121 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಕೋವಿಡ್‌ನಿಂದ 348 ಜನರುಮೃತಪಟ್ಟಿದ್ದಾರೆ. ಭದ್ರಾವತಿಯಲ್ಲಿ ಇಬ್ಬರು, ಶಿವಮೊಗ್ಗ ಹಾಗೂ ಹೊರ ಜಿಲ್ಲೆಯಿಂದ ಬಂದಿದ್ದ ತಲಾ ಇಬ್ಬರಿಗೆ ಸೋಂಕು ತಗುಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.