ADVERTISEMENT

ಸರಗಳ್ಳತನ: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 6:58 IST
Last Updated 4 ಜುಲೈ 2021, 6:58 IST
ಸೊರಬದಲ್ಲಿ ಬಂಗಾರ ಕಳವು ಮಾಡಿದ್ದ ಆರೋಪಿಯನ್ನು ಶನಿವಾರ ಪೊಲೀಸರು ಬಂಧಿಸಿದರು
ಸೊರಬದಲ್ಲಿ ಬಂಗಾರ ಕಳವು ಮಾಡಿದ್ದ ಆರೋಪಿಯನ್ನು ಶನಿವಾರ ಪೊಲೀಸರು ಬಂಧಿಸಿದರು   

ಸೊರಬ: ತಾಲ್ಲೂಕಿನ ಛತ್ರದಹಳ್ಳಿ ಗ್ರಾಮದ ರಮೇಶ ಎಂಬುವರ ಮನೆಯಲ್ಲಿ ಬಂಗಾರ ಕಳವು ಮಾಡಿದ್ದ ಆರೋಪಿ ಚಂದ್ರಪ್ಪ ಅವರನ್ನು ಪಿಎಸ್‌ಐ ಪ್ರಶಾಂತಕುಮಾರ್ ನೇತೃತ್ವದಲ್ಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಆರೋಪಿ ಸೆರೆಹಿಡಿಯುವಲ್ಲಿ ಯಶಸ್ವಿಯಾದ ಪೊಲೀಸರು ಆರೋಪಿಯಿಂದ ₹ 96 ಸಾವಿರ ಮೌಲ್ಯದ 25 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಜೂನ್ 29ರಂದು ಛತ್ರದಹಳ್ಳಿ ಗ್ರಾಮದ ಆರೋಪಿ ಚಂದ್ರಪ್ಪ ಅದೇ ಗ್ರಾಮದ ರಮೇಶ ಎಂಬುವರ ಮನೆಯಲ್ಲಿ ಉಂಗುರ, ಕಿವಿ ಆಭರಣ ಹಾಗೂ ಸರ ಸೇರಿ ಒಟ್ಟು 25 ಗ್ರಾಂ ಚಿನ್ನವನ್ನು ಕಳವು ಮಾಡಿದ್ದ.

ADVERTISEMENT

ಪಿಎಸ್‌ಐ ಪ್ರಶಾಂತಕುಮಾರ್, ಅಪರಾಧ ವಿಭಾಗದ ಸಲ್ಮಾನ್ ಖಾನ್ ಹಾಜಿ, ಸಿದ್ದನಗೌಡ, ಶಶಿಧರ, ಜಗದೀಶ್, ಸಂದೀಪ, ಸುಧಾಕರ್, ಪರಮೇಶ್ವರ ನಾಯಕ್ ತಂಡ ಆರೋಪಿಯನ್ನು ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.