ಭದ್ರಾವತಿ: ನಗರದ ಮಿತ್ರ ಕಲಾ ಮಂಡಳಿ ಆಶ್ರಯದಲ್ಲಿ ನಾಟಕ ಕಲಿಯಲು ಬಯಸುವ ಯುವ ಸಮುದಾಯದವರಿಗೆ ಮೊದಲ ಬಾರಿಗೆ ರಂಗಭೂಮಿ ಕಲಾವಿದ, ನಿರ್ದೇಶಕ ಅಪರಂಜಿ ಶಿವರಾಜ್ ನಿರ್ದೇಶನದಲ್ಲಿ ಉಚಿತ ತರಬೇತಿ ಆಯೋಜಿಸಲಾಗಿದೆ.
ಈಗಾಗಲೇ ಯುವ ಸಮುದಾಯದ ಸಾಕಷ್ಟು ಮಂದಿಗೆ ತರಬೇತಿ ನೀಡಲಾಗಿದ್ದು, ತರಬೇತಿ ಪಡೆದವರಿಂದ ಹಲವು ವೇದಿಕೆಗಳಲ್ಲಿ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಆಸಕ್ತ ಯುವಕ – ಯುವತಿಯರು ರಂಗ ತರಬೇತಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗೆ ಮೊ. ಸಂಖ್ಯೆ 79750 42130 ಅಥವಾ 99805 34406 ಸಂಖ್ಯೆಗೆ ಕರೆ ಮಾಡಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.