ADVERTISEMENT

ಗಾಂಜಾ ಬೆಳೆದ ಆರೋಪಿಗೆ 4 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 9 ಮೇ 2019, 14:17 IST
Last Updated 9 ಮೇ 2019, 14:17 IST

ಶಿವಮೊಗ್ಗ: ಶುಂಠಿ ಬೆಳೆಯ ಮಧ್ಯೆ ಗಾಂಜಾ ಬೆಳೆದಿದ್ದ ಆರೋಪಿಗೆ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 4 ವರ್ಷಗಳ ಕಠಿಣ ಶಿಕ್ಷೆ, ₹20 ಸಾವಿರ ದಂಡ ವಿಧಿಸಿದೆ.

ಶಿಕಾರಿಪುರ ತಾಲ್ಲೂಕು ಹುಣಸೆಕಟ್ಟೆಯ ಈಶ್ವರ (44) ಶಿಕ್ಷೆಗೆ ಒಳಗಾದ ಆರೋಪಿ.

ಗುಡ್ಡದಹೊಸಳ್ಳಿ ಜಮೀನಿನಲ್ಲಿ ₹71 ಸಾವಿರ ಮೌಲ್ಯದ ಗಾಂಜಾ ಬೆಳೆದಿದ್ದರು. ಡಿವೈಎಸ್‌ಪಿ ಸುಧಾಕರ್ ನಾಯಕ್‌ ನೇತೃತ್ವದ ತಂಡ ದಾಳಿ ನಡೆಸಿ, ವಶಪಡಿಸಿಕೊಂಡಿತ್ತು. ಶಿಕಾರಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ADVERTISEMENT

ವಿಚಾರಣೆ ನಡೆಸಿದ ಪ್ರಭಾವತಿ ಹಿರೇಮಠ ಅವರು ಗುರುವಾರ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ವಿ.ಜಿ.ಯಳಗೇರಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.