ADVERTISEMENT

₹ 13.16 ಲಕ್ಷ ಮೌಲ್ಯದ ಗಾಂಜಾ ನಾಶ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2024, 16:30 IST
Last Updated 9 ಫೆಬ್ರುವರಿ 2024, 16:30 IST
ವಿವಿಧೆಡೆ ನಡೆದ ದಾಳಿಯಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಭದ್ರಾವತಿ ಸಮೀಪದ ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಪೊಲೀಸರು ಶುಕ್ರವಾರ ನಾಶಪಡಿಸಿದರು
ವಿವಿಧೆಡೆ ನಡೆದ ದಾಳಿಯಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಭದ್ರಾವತಿ ಸಮೀಪದ ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಪೊಲೀಸರು ಶುಕ್ರವಾರ ನಾಶಪಡಿಸಿದರು   

ಭದ್ರಾವತಿ: ಶಿವಮೊಗ್ಗ ಜಿಲ್ಲೆಯಾದ್ಯಂತ 6 ತಿಂಗಳಲ್ಲಿ ನಡೆದ ಪೊಲೀಸರ ದಾಳಿಯಲ್ಲಿ ಪತ್ತೆಯಾದ ಒಟ್ಟು 34 ಕೆ.ಜಿ. 825 ಗ್ರಾಂ ಒಣ ಗಾಂಜಾವನ್ನು ಶುಕ್ರವಾರ ಸಮೀಪದ ಮಾಚೇನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ನಾಶ ಪಡಿಸಲಾಯಿತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ಸಮ್ಮುಖದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಒಟ್ಟು 42 ಪ್ರಕರಣಗಳಲ್ಲಿ ಪಡಿಸಿಕೊಳ್ಳಲಾದ ₹ 13.16 ಲಕ್ಷ ಮೌಲ್ಯದ ಗಾಂಜಾವನ್ನು ನಾಶಪಡಿಸಲಾಯಿತು. 

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ, ಎ.ಜಿ. ಕಾರ್ಯಪ್ಪ, ಗಿರೀಶ್ ಸಿ.ಎಸ್, ಹರೀಶ್ ದೆಲಂತ ಬೆಟ್ಟು, ಡಿವೈಎಸ್ಪಿ ಬಾಬು ಆಂಜನಪ್ಪ, ಸುರೇಶ್ ಎಂ., ವಿನಾಯಕ ಬಿ.ಆರ್. ಭಾಗವಹಿಸಿದ್ದರು.

ADVERTISEMENT

ಗಾಂಜಾ ಮಾರಾಟ, ಸಾಗಣೆ, ಸಂಗ್ರಹ ಮಾಡುವವರ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.