ADVERTISEMENT

ಅರೆಬೆತ್ತಲೆಯಾಗಿ ಕಸಗುಡಿಸಿ ಪ್ರತಿಭಟಿಸಿದ ಗ್ರಾ.ಪಂ. ಅಧ್ಯಕ್ಷ

ನರೇಗಾ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಗ್ರಾ.ಪಂ. ಅಧಿಕಾರ ಮೊಟಕು

​ಪ್ರಜಾವಾಣಿ ವಾರ್ತೆ
Published 27 ಮೇ 2022, 5:22 IST
Last Updated 27 ಮೇ 2022, 5:22 IST
ಹೊಸನಗರ ತಾಲ್ಲೂಕು ಪಂಚಾಯಿತಿಯಲ್ಲಿ ಅರೆಬೆತ್ತಲೆಯಾಗಿ ಕಸ ಗುಡಿಸುವ ಮೂಲಕ ಪ್ರತಿಭಟನೆ ನಡೆಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ.
ಹೊಸನಗರ ತಾಲ್ಲೂಕು ಪಂಚಾಯಿತಿಯಲ್ಲಿ ಅರೆಬೆತ್ತಲೆಯಾಗಿ ಕಸ ಗುಡಿಸುವ ಮೂಲಕ ಪ್ರತಿಭಟನೆ ನಡೆಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ.   

ಹೊಸನಗರ: ನರೇಗಾ ಯೋಜನೆಯಡಿ ಕಾಮಗಾರಿ ನಿರ್ವಹಿಸಲು ಗ್ರಾಮ ಪಂಚಾಯಿತಿ ಅಧಿಕಾರವನ್ನು ಕಸಿದುಕೊಂಡ ತೋಟಗಾರಿಕಾ ಇಲಾಖಾ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಮೂಡುಗೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ ಶೆಟ್ಟಿ ಅವರು ಅರೆಬೆತ್ತೆಲೆಯಾಗಿ ತಾಲ್ಲೂಕು ಪಂಚಾಯಿತಿ ಕಚೇರಿ ಗುಡಿಸುವ ಮೂಲಕ ಪ್ರತಿಭಟನೆ ದಾಖಲಿಸಿದರು.

‘ನರೇಗಾ ಯೋಜನೆಯಡಿ ಗ್ರಾಮಸಭೆಯಲ್ಲಿ ನಿರ್ಣಯಗೊಂಡ ಫಲಾನುಭವಿಗಳಿಗೆ ಅಡಕೆ ಗಿಡ ನೆಡಲು ಅನುದಾನ ನೀಡುವ ಅಧಿಕಾರ ಗ್ರಾಮ ಪಂಚಾಯಿತಿಗಳಿಗಿ. ಆದರೆ, ಗ್ರಾಮ ಪಂಚಾಯಿತಿಗೆ ಯಾವುದೇ ಮಾಹಿತಿ ನೀಡದ ತೋಟಗಾರಿಕಾ ಇಲಾಖಾ ಅಧಿಕಾರಿಗಳು ಲಂಚ ಪಡೆದು ಫಲಾನುಭವಿಗಳನ್ನು ಗುರುತಿಸಿ, ಪಟ್ಟಿಯನ್ನು ತಾಲ್ಲೂಕು ಪಂಚಾಯಿತಿ ಇಒ ಅವರಿಗೆ ಕಳುಹಿಸಿ ಮಂಜೂರು ಪಡೆದಿದ್ದಾರೆ’ ಎಂದು ದೂರಿದರು.

‘ಗ್ರಾಮ ಪಂಚಾಯಿತಿಗಿರುವ ಪರಮಾಧಿಕಾರಿ ಕಸಿದುಕೊಂಡು, ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳ ಸಹಿಯನ್ನು ಪಡೆಯದೇ ಅಕ್ರಮವಾಗಿ ಪಟ್ಟಿ ತಯಾರಿಸಲಾಗಿದೆ. ನಮ್ಮ ಕೆಲಸವನ್ನು ತಾಲ್ಲೂಕು ಪಂಚಾಯಿತಿ ಇಒ ಮತ್ತು ಇತರೆ ಅಧಿಕಾರಿಗಳು ನಿರ್ವಹಿಸಿದ ಕಾರಣ ತಾಲ್ಲೂಕು ಪಂಚಾಯಿತಿ ಕಚೇರಿಗೆ ತೆರಳಿ ಕಸಗುಡಿಸುವ ಮೂಲಕ ಪ್ರತಿಭಟಿಸಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರಶೆಟ್ಟಿ ತಿಳಿಸಿದ್ದಾರೆ.

ADVERTISEMENT

‘ಜಿಲ್ಲಾ ಪಂಚಾಯಿತಿ ಸಿಇಒ ಅವರು ಈ ಬಗ್ಗೆ ಕೂಡಲೇ ಗಮನಹರಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.