ಶಿಕಾರಿಪುರ:ಪಿಎಸ್ಐ ಪರೀಕ್ಷಾಅಕ್ರಮ ಸಂಗತಿ ತನಿಖಾ ಹಂತದಲ್ಲಿದ್ದು, ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ಪರೀಕ್ಷೆ ಅಕ್ರಮದ ಮೊಕದ್ದಮೆ ತನಿಖಾ ಹಂತದಲ್ಲಿರುವುದರಿಂದ ಸರ್ಕಾರದಲ್ಲಿರುವವರು ಹೇಳಿಕೆ ಕೊಡುವುದು ಸರಿಯಲ್ಲ. ತನಿಖೆ ಪಾರದರ್ಶಕವಾಗಿ ನಡೆಯುತ್ತಿದೆ ಎಂದರು.
ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ನಾಯಕರ ರೀತಿ ಹೇಳಿಕೊಂಡು ನಾವು ಒಡಾಡುವುದಿಲ್ಲ. ನಾವು ಮಾಡಿ ತೋರಿಸುತ್ತೇವೆ ಎಂದೂ ನುಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.