ADVERTISEMENT

ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಮಳೆಯ ಅಬ್ಬರ, ನೆಲಕ್ಕುರುಳಿದ ಮರಗಳು

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 12:57 IST
Last Updated 15 ಜುಲೈ 2021, 12:57 IST

ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಮಳೆಯ ಅಬ್ಬರ ಮುಂದುವರಿದಿದೆ. ಸೊರಬ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮರಗಳು ಧರೆಗೆ ಉರುಳಿವೆ. ಹೊಸನಗರದಲ್ಲಿ ಮನೆಗಳು ಕುಸಿದಿವೆ.

ಚಂದ್ರಗುತ್ತಿ ಸಮೀಪ ಶತಮಾನದ ಮರ ಉರುಳಿ ಬಿದ್ದಿದೆ. ಹಣಗೆರೆ ಮಾರ್ಗದಲ್ಲೂ ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ಕೆಲವು ಸಮಯ ಸಂಚಾರಕ್ಕೆ ಅಡ್ಡಿಯಾಗಿತ್ತು.

ಜಲಾಶಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಒಂದೇ ದಿನ ಲಿಂಗನಮಕ್ಕಿ ಜಲಾಶಯಕ್ಕೆ 2 ಅಡಿ, ಭದ್ರಾ ಜಲಾಶಯಕ್ಕೆ 1.6 ಅಡಿ ನೀರು ಬಂದಿದೆ.

ADVERTISEMENT

ಲಿಂಗನಮಕ್ಕಿ ವ್ಯಾಪ್ತಿಯಲ್ಲಿ 12 ಸೆಂ.ಮೀ, ಮಾಣಿ ವ್ಯಾಪ್ತಿಯಲ್ಲಿ 19.4, ಯಡೂರಿನಲ್ಲಿ 16.6, ಹುಲಿಕಲ್‌ನಲ್ಲಿ 13.2 ಸೆಂ.ಮೀ. ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.