ADVERTISEMENT

ತೀರ್ಥಹಳ್ಳಿ: ಅಕಾಲಿಕ ಮಳೆ, ಕೃಷಿ ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 21 ಮೇ 2022, 4:37 IST
Last Updated 21 ಮೇ 2022, 4:37 IST
ಶಂಕರಪ್ಪ
ಶಂಕರಪ್ಪ   

ತೀರ್ಥಹಳ್ಳಿ: ಅಕಾಲಿಕ ಮಳೆಯಿಂದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತ ಕಾರ್ಮಿಕರೊಬ್ಬರು ಗುರುವಾರ ಮೃತಪಟ್ಟಿದ್ದಾರೆ.

ಮೇಲಿನ ತೂದೂರಿನ ಶಂಕರಪ್ಪ (52) ಮೃತ ವ್ಯಕ್ತಿ. ಮಳೆಯಿಂದಾದ ಅನಾಹುತ ತಡೆಯಲು ಕೃಷಿ ಭೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮನೆಗೆ ತೆರಳುವ ಧಾವಂತದಲ್ಲಿದ್ದ ಶಂಕರಪ್ಪ ಗದ್ದೆ ಅಂಚಿನಿಂದ ಕಾಲು ಜಾರಿ ಹಳ್ಳಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಕೃಷಿ ಜಮೀನಿನಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಶಂಕರಪ್ಪ ಕುಟುಂಬದ ಆಧಾರ ಸ್ತಂಭವಾಗಿದ್ದರು. ಅವರಿಗೆ ಪತ್ನಿ, 8ನೇ ತರಗತಿ ಓದುತ್ತಿರುವ ಪುತ್ರ ಇದ್ದಾರೆ.

ADVERTISEMENT

ಘಟನಾ ಸ್ಥಳಕ್ಕೆ ತಹಶೀಲ್ದಾರ್‌ ಡಾ.ಶ್ರೀಪಾದ್‌, ತೂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಧುರಾಜ್‌ ಹೆಗ್ಡೆ, ರಾಜಸ್ವ ನಿರೀಕ್ಷಕ ಮಂಜುನಾಥ್‌ ಹಾಗೂ ಸಿಬ್ಬಂದಿ ಭೇಟಿ ನೀಡಿಪರಿಶೀಲಿಸಿದರು. ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.