ADVERTISEMENT

ತೀರ್ಥಹಳ್ಳಿ: ಮುಂಡುವಳ್ಳಿ ಸೇತುವೆ ಮಣ್ಣು ನೀರು ಪಾಲು

​ಪ್ರಜಾವಾಣಿ ವಾರ್ತೆ
Published 25 ಜುಲೈ 2023, 12:27 IST
Last Updated 25 ಜುಲೈ 2023, 12:27 IST
ಮುಂಡೊಳ್ಳಿ ಸೇತುವೆ ಮಣ್ಣು ಜರುಗುತ್ತಿರುವುದನ್ನು ಅಧಿಕಾರಿಗಳು ವೀಕ್ಷಿಸುತ್ತಿರುವುದು
ಮುಂಡೊಳ್ಳಿ ಸೇತುವೆ ಮಣ್ಣು ಜರುಗುತ್ತಿರುವುದನ್ನು ಅಧಿಕಾರಿಗಳು ವೀಕ್ಷಿಸುತ್ತಿರುವುದು   

ತೀರ್ಥಹಳ್ಳಿ: ಹೆದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡುವಳ್ಳಿ ಸೇತುವೆಗೆ ತಡೆಗೋಡೆ ಇಲ್ಲದ ಕಾರಣ ಮಣ್ಣು ಜರುಗುತ್ತಿದೆ. ಮಂಗಳವಾರ ಲೋಕೋಪಯೋಗಿ ಇಲಾಖೆ ಎಂಜಿನಿಯರರು, ತಾಲ್ಲೂಕು ಪಂಚಾಯಿತಿ ಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಲ್ಕು ತಿಂಗಳ ಹಿಂದೆ ಅಂದಾಜು ₹10 ಕೋಟಿ ವೆಚ್ಚದಲ್ಲಿ ಸೇತುವೆ ಕಾಮಗಾರಿ ಮುಕ್ತಾಯಗೊಂಡಿದೆ. ನೀರಿನ ಹರಿವಿಗೆ ತಕ್ಕಂತೆ ತಡೆಗೋಡೆ ನಿರ್ಮಿಸಿರಲಿಲ್ಲ. ತುಂಗಾ ನದಿಯಲ್ಲಿ ನೆರೆ ಹೆಚ್ಚಾದಂತೆ ಸೇತುವೆ ಸಂಪರ್ಕ ಕಡಿತಗೊಳ್ಳುವ ಆತಂಕ ಸುತ್ತಮುತ್ತಲ ಗ್ರಾಮದಲ್ಲಿ ಸೃಷ್ಟಿಯಾಗಿದೆ ಎಂದು ಸ್ಥಳೀಯರು ದೂರುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT