ಶಿವಮೊಗ್ಗ: ಆಗುಂಬೆ ಮಾರ್ಗದಲ್ಲಿ ಮಣ್ಣು ಕುಸಿತದ ಕಾರಣ ಮುಂಜಾಗ್ರತಾ ಕ್ರಮವಾಗಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶಿಸಿದ್ದಾರೆ.
ಜಿಲ್ಲೆಯ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿಯ ಮಾರ್ಗ ಬದಿ ಮಣ್ಣು ಕುಸಿತವಾಗುವ ಸಂಭವವಿರುವುದರಿಂದ ಸಂಚಾರ ನಿಷೇಧಿಸಿ ಪರ್ಯಾಯ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
12 ಟನ್ ಅಧಿಕ ಭಾರದ ವಾಹನಗಳು ಶಿವಮೊಗ್ಗ-ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಕೆರೆಕಟ್ಟೆ-ಕಾರ್ಕಳ-ಉಡುಪಿ-ಮಂಗಳೂರು ಅಥವಾ ಶಿವಮೊಗ್ಗ–ತೀರ್ಥಹಳ್ಳಿ-ಮಾಸ್ತಿಕಟ್ಟೆ- ಹುಲಿಕಲ್-ಹೊಸಂಗಡಿ-ಸಿದ್ಧಾಪುರ-ಉಡುಪಿ ಮಾರ್ಗಗಳ ಮೂಲಕ ಸಂಚರಿಸುವಂತೆ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.