ADVERTISEMENT

ಹೊಂಬುಜ ಕ್ಷೇತ್ರ: 26ರಿಂದ ಜೀರ್ಣೋದ್ಧಾರ ಕಾರ್ಯ

26ರೊಳಗೆ ದೇವರ ದರ್ಶನ ಪಡೆಯಲು ಮನವಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 5:25 IST
Last Updated 15 ಅಕ್ಟೋಬರ್ 2020, 5:25 IST
ಪದ್ಮಾವತಿ ದೇವಿ
ಪದ್ಮಾವತಿ ದೇವಿ   

ರಿಪ್ಪನ್‌ಪೇಟೆ:ಸಮೀಪದ ಶ್ರೀ ಕ್ಷೇತ್ರ ಹೊಂಬುಜ ಮಠದ ಮಾತೆ ಪದ್ಮಾವತಿದೇವಿ ಹಾಗೂ ಪಾರ್ಶ್ವನಾಥ ಸ್ವಾಮಿಯ ಜೀರ್ಣೋದ್ಧಾರ ಕಾರ್ಯ ಅ.‌ 26ರಿಂದ ನಡೆಯಲಿದೆ.

ಮಠದ ಪೀಠಾಧಿಕಾರಿ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ನೇತೃತ್ವದಲ್ಲಿ ಜೀರ್ಣೋದ್ಧಾರ ಕಾರ್ಯ ನಡೆಯಲಿದೆ.ಕೋವಿಡ್–19 ಕಾರಣ ಮಠಕ್ಕೆ ಭೇಟಿ ನೀಡಲು ಸಾಧ್ಯವಾಗದ ರಾಜ್ಯ ಹಾಗೂ ಹೊರ ರಾಜ್ಯದ ಭಕ್ತರು ಶ್ರೀಕ್ಷೇತ್ರಕ್ಕೆ ಅ. 26ರ ಮುಂಚಿತವಾಗಿ ಭೇಟಿ ನೀಡಿ ದೇವಿ ದರ್ಶನ ಪಡೆಯಬೇಕು ಎಂದು ಸ್ವಾಮೀಜಿ ಮನವಿ ಮಾಡಿದ್ದಾರೆ.

ಬಳಿಕ ನಿತ್ಯ ಪೂಜಾ ಕೈಂಕರ್ಯ ಹೊರತು ಪಡಿಸಿ ವಿಶೇಷ ಪೂಜೆಗೆ ಅವಕಾಶವಿಲ್ಲ ಎಂದು ಮಠದ ಆಡಳಿತಾಧಿಕಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.