ಶಿವಮೊಗ್ಗ: ಹಾಸನ ಜಿಲ್ಲೆ, ಅರಸೀಕರೆ ತಾಲ್ಲೂಕು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.
ಕೋಮು ಸೌಹಾರ್ದಕ್ಕಾಗಿ ಶ್ರೀಗಳು ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಾವಿರಾರು ಮಕ್ಕಳಿಗೆ ಉಚಿತ ಶಿಕ್ಷಣ ನೀಡಿದ್ದಾರೆ. ಅನ್ನ ಮತ್ತು ಶಿಕ್ಷಣದ ಮೂಲಕ ಗ್ರಾಮೀಣ ಭಾಗದ ಬಡ ಮಕ್ಕಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹಾಗಾಗಿ, ಅವರನ್ನು ಪರಿಗಣಿಸಲಾಗಿದೆ ಎಂದು ಕುಲಪತಿ ಜೋಗನ್ ಶಂಕರ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಗೌರವ ಡಾಕ್ಟರೇಟ್ಗಾಗಿ ಈ ಬಾರಿ ಒಟ್ಟು 12 ಅರ್ಜಿಗಳು ಬಂದಿದ್ದವು. ಅಂತಿಮವಾಗಿ ಕೋಡಿಮಠ ಶ್ರೀಗಳು ಆಯ್ಕೆಯಾಗಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.