ADVERTISEMENT

ಮನೆಯ ಬೀಗ ಮುರಿದು ನಗದು, ಚಿನ್ನಾಭರಣ ಕಳವು

​ಪ್ರಜಾವಾಣಿ ವಾರ್ತೆ
Published 22 ಮೇ 2025, 13:43 IST
Last Updated 22 ಮೇ 2025, 13:43 IST
ಭದ್ರಾವತಿ ಹಳೇ ನಗರ ಕೆ.ಎಸ್.ಆರ್.ಟಿ.ಸಿ. ಬಸ್ ಘಟಕದ ಸಮೀಪದ ದೇವರಾಜ್ ಅರಸ್ ಬಡಾವಣೆಯ ಬಿ.ಸಿ.ಎಂ. ಬಾಲಕಿಯರ ವಿದ್ಯಾರ್ಥಿ ನಿಲಯದ ಪಕ್ಕದಲ್ಲಿರುವ ಎಂ.ಜಿ ರಮೇಶ್ ಎಂಬುವರ ಮನೆ ಬೀಗ ಮುರಿದು ನಗದು, ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. .
ಭದ್ರಾವತಿ ಹಳೇ ನಗರ ಕೆ.ಎಸ್.ಆರ್.ಟಿ.ಸಿ. ಬಸ್ ಘಟಕದ ಸಮೀಪದ ದೇವರಾಜ್ ಅರಸ್ ಬಡಾವಣೆಯ ಬಿ.ಸಿ.ಎಂ. ಬಾಲಕಿಯರ ವಿದ್ಯಾರ್ಥಿ ನಿಲಯದ ಪಕ್ಕದಲ್ಲಿರುವ ಎಂ.ಜಿ ರಮೇಶ್ ಎಂಬುವರ ಮನೆ ಬೀಗ ಮುರಿದು ನಗದು, ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. .   

ಭದ್ರಾವತಿ: ಹಳೇ ನಗರದ ಕೆಎಸ್‌ಆರ್‌ಟಿಸಿ ಬಸ್ ಘಟಕ ಸಮೀಪ ದೇವರಾಜ ಅರಸ್ ಬಡಾವಣೆಯಲ್ಲಿ ಈಚೆಗೆ ದುಷ್ಕರ್ಮಿಗಳು ಮನೆಯೊಂದರ ಬೀಗ ಮುರಿದು ನಗದು, ಚಿನ್ನಾಭರಣ ಕಳವು ಮಾಡಿದ್ದಾರೆ.

ಎಂ.ಜಿ.ರಮೇಶ್ ಮತ್ತು ಕುಟುಂಬದವರು ಊರಿಗೆ ಹೋಗಿದ್ದಾಗ ಕಾಂಪೌಂಡ್ ಗೇಟ್ ಹಾರಿ ಮನೆಯ ಬಾಗಿಲ ಬೀಗ ಮುರಿದು ಕಳವು ಮಾಡಲಾಗಿದೆ.

ಬುಧವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಮನೆಯವರು ಊರಿಂದ ಬಂದು ನೋಡಿದಾಗ ಕಳವು ಮಾಡಿರುವುದು ಗೊತ್ತಾಗಿದೆ.

ADVERTISEMENT

ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಹಾಗೂ ಹಳೇನಗರ ಪೊಲೀಸ್ ಠಾಣೆ ಉಪನಿರೀಕ್ಷಕ ಚಂದ್ರಶೇಖರ ನಾಯಕ್ ಮತ್ತು ಸಿಬ್ಬಂದಿ ಹಾಲಪ್ಪ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.