ADVERTISEMENT

ಹುಚ್ಚರಾಯಸ್ವಾಮಿ ಜಾತ್ರೆಯಲ್ಲಿ ಮಳಿಗೆ ಎಲ್ಲ ಧರ್ಮದವರಿಗೂ ಅವಕಾಶ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 20:33 IST
Last Updated 7 ಏಪ್ರಿಲ್ 2022, 20:33 IST

ಶಿಕಾರಿಪುರ:ಪಟ್ಟಣದ ಹುಚ್ಚರಾಯಸ್ವಾಮಿ ದೇವರ ಜಾತ್ರಾ ಮಹೋತ್ಸವ ಏಪ್ರಿಲ್‌ 15, 16ರಂದು ನಡೆಯಲಿದ್ದು, ಜಾತ್ರೆಯಲ್ಲಿ ಮಳಿಗೆ ಹಾಕಲು ಎಲ್ಲ ಧರ್ಮದವರಿಗೂ ಅವಕಾಶ ನೀಡಲಾಗಿದೆ. ‘ದೇವಸ್ಥಾನ ಆವರಣದಿಂದ ದೂರದಲ್ಲಿ ವಾಣಿಜ್ಯ ಮಳಿಗೆ ಹಾಗೂ ಮಕ್ಕಳ ಆಟಿಕೆ ಯಂತ್ರಗಳನ್ನು ಹಾಕಲು ಅವಕಾಶ ನೀಡಲಾಗಿದ್ದು, ಯಾವುದೇ ಧರ್ಮದವರಿಗೆ ನಿರ್ಬಂಧ ಹೇರಿಲ್ಲ. ಎಲ್ಲ ಧರ್ಮದವರು ವ್ಯಾಪಾರ ವಹಿವಾಟು ನಡೆಸಬಹುದು’ ಎಂದು ಜಾತ್ರಾ ಮಹೋತ್ಸವದ ಸಂಚಾಲಕ ಗುರುರಾಜ್ ರಾವ್ ಜಗತಾಪ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.