ADVERTISEMENT

ಶಿವಮೊಗ್ಗ: ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಪ್ರವಾಸ ರದ್ದು

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2020, 14:49 IST
Last Updated 23 ಆಗಸ್ಟ್ 2020, 14:49 IST
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ   

ಶಿವಮೊಗ್ಗ: ಆ.25ರಂದು ನಿಗದಿಯಾಗಿದ್ದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಪ್ರವಾಸ ರದ್ದಾಗಿದೆ.

ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಆ.25ರಂದು ಜೆಡಿಎಸ್‌ ಹಮ್ಮಿಕೊಂಡಿದ್ದ ಕೃಷಿ ಉತ್ಪನ್ನ ಮಾರುಕಟ್ಟೆ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳ ವಿರುದ್ಧ ಜನಜಾಗೃತಿ ವಿಚಾರ ಸಂಕೀರ್ಣದಲ್ಲಿ ಅವರು ಭಾಗವಹಿಸಬೇಕಿತ್ತು.

ದೇವೇಗೌಡರ ಪ್ರವಾಸ ರದ್ದಾಗಿದೆ. ಹಾಗಾಗಿ, ಅಂದಿನ ವಿಚಾರ ಸಂಕಿರಣವನ್ನೂ ಮುಂದೂಡಲಾಗಿದೆ ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.