ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪ ಸೂಳೆಮುರ್ಕಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ.
ಹೀಗಾಗಿ ಸುರಕ್ಷತೆಯ ದೃಷ್ಟಿಯಿಂದ ಗೇರುಸೊಪ್ಪ ಗ್ರಾಮದಿಂದ ಸಿದ್ದಾಪುರ ತಾಲ್ಲೂಕಿನ ಮಾವಿನಗುಂಡಿ ಗ್ರಾಮದವರೆಗೆ ರಸ್ತೆ ಸಂಚಾರ ನಿಷೇಧಿಸಲಾಗಿದೆ.
ಹೊನ್ನಾವರದಿಂದ ಸಿದ್ದಾಪುರ, ಜೋಗ, ಸಾಗರ ಕಡೆಗೆ ಹೋಗುವ ವಾಹನಗಳು ಹೊನ್ನಾವರ, ಕುಮಟಾ, ಸಂತೆಗುಳಿ ಮಾರ್ಗವಾಗಿ ಸಿದ್ದಾಪುರ ತಲುಪುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.