ಶಿವಮೊಗ್ಗ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೊಪ್ಪು ಮಾರಾಟ ಮಾಡಿದ್ದ ಆರೋಪಿಗೆ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 4 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, 20 ಸಾವಿರ ದಂಡ ವಿಧಿಸಿದೆ.
ಶಿಕಾರಿಪುರ ತಾಲ್ಲೂಕು ಚಿಕ್ಕಕೊರಲಹಳ್ಳಿ ಶೇಖರಪ್ಪ ಶಿಕ್ಷೆಗೆ ಒಳಗಾದ ಆರೋಪಿ.
ಅಂಜನಾಪುರ ಸರ್ಕಲ್ ಬಳಿ 2016ರಲ್ಲಿ ₨ 12 ಸಾವಿರ ಮೌಲ್ಯದ ಗಾಂಜಾ ಸೊಪ್ಪು ಮಾರಾಟ ಮಾಡುವಾಗ ಡಿಸಿಐಬಿ ಅಧಿಕಾರಿಗಳು ಬಂಧಿಸಿದ್ದರು.
ಪ್ರಕರಣದ ವಾದ ಆಲಿಸಿದ ನ್ಯಾಯಾಧೀಶರಾದ ಪ್ರಭಾವತಿ ಎಂ. ಹಿರೇಮಠ್ ಅವರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕ ವಿ.ಜಿ. ಯಳಗೇರಿ ವಾದ ಮಂಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.