ADVERTISEMENT

ಹಗರಣದ ಪ್ರಸ್ತಾಪ ಗಾಳಿಯಲ್ಲಿ ಗುಂಡು ಹೊಡೆದಂತೆ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 14:06 IST
Last Updated 8 ಜುಲೈ 2020, 14:06 IST
ಕೆ.ಎಸ್‌.ಈಶ್ವರಪ್ಪ
ಕೆ.ಎಸ್‌.ಈಶ್ವರಪ್ಪ   

ಶಿವಮೊಗ್ಗ: ಪಿಪಿಇ ಕಿಟ್‌ ಸೇರಿದಂತೆ ಕೊರೊನಾ ನಿಯಂತ್ರಣ ಕಾರ್ಯದ ಪರಿಕರಗಳ ಖರೀದಿಯಲ್ಲಿ ಹಗರಣನಡೆದಿದೆಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ ಎಂದುಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

ನಗರದಲ್ಲಿ ಬುಧವಾರ ಪತ್ರಕರ್ತರ ಜತೆ ಅವರು ಮಾತನಾಡಿದರು.

ವಿರೋಧ ಪಕ್ಷದವರುಸಕ್ರಿಯರಾಗಿದ್ದಾರೆಎಂದು ಖಚಿತ ಪಡಿಸಿಕೊಳ್ಳಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ದಾಖಲೆ ಇದ್ದರೆ ಬಿಡುಗಡೆ ಮಾಡಲಿ, ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.

ADVERTISEMENT

ಆನ್‌ಲೈನ್‌ ಶಿಕ್ಷಣ ಕುರಿತು ಪರ, ವಿರೋಧ ಚರ್ಚೆಗಳು ನಡೆಯುತ್ತಿದೆ. ಯಾವಮಕ್ಕಳನ್ನೂ ಶಿಕ್ಷಣದಿಂದ ವಂಚನೆ ಮಾಡಲಾಗುವುದಿಲ್ಲ.ಶಾಲೆಗೆ ಹೋದರೆ ಕೊರೊನಾ ವೈರಸ್‌ತಗುಲುತ್ತದೆ ಎಂಬ ಆತಂಕ ಪೋಷಕರಲ್ಲಿದೆ. ಹಾಗಾಗಿ, ಆನ್‌ಲೈನ್‌ ಶಿಕ್ಷಣ ಸೂಕ್ತ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.