ADVERTISEMENT

ಶಿವಮೊಗ್ಗ: ತುಂಗಾ ಜಲಾಶಯಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಬಾಗಿನ ಅರ್ಪಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜೂನ್ 2021, 13:16 IST
Last Updated 23 ಜೂನ್ 2021, 13:16 IST
ಶಿವಮೊಗ್ಗ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಜಯಲಕ್ಷ್ಮಿ ದಂಪತಿ ಬುಧವಾರ ಗಾಜನೂರು ತುಂಗಾ ಜಲಾಶಯಕ್ಕೆ  ಬಾಗಿನ ಅರ್ಪಿಸಿದರು.
ಶಿವಮೊಗ್ಗ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಜಯಲಕ್ಷ್ಮಿ ದಂಪತಿ ಬುಧವಾರ ಗಾಜನೂರು ತುಂಗಾ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.   

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಜಯಲಕ್ಷ್ಮಿ ದಂಪತಿ ಬುಧವಾರ ಗಾಜನೂರು ತುಂಗಾ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಈ ಬಾರಿ ಉತ್ತಮ ಮಳೆಯಾಗಿದೆ. ರೈತರೆಲ್ಲರೂ ಸಂತಸದಿಂದ ಇದ್ದಾರೆ. ಒಂದೇ ಮಳಗಾಲದಲ್ಲಿ ಗಾಜನೂರು ಜಲಾಶಯ ಮೂರನೇ ಬಾರಿ ತುಂಬಿದೆ. ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆಯ ಆಧಾರವಾಗಿರುವ ಜಲಾಶಯ ಕೃಷಿಗೂ ಆಸರೆಯಾಗಿದೆ ಎಂದರು.

ದಕ್ಷಿಣ ಭಾರತದಲ್ಲಿ ಲಸಿಕೆ ಹಾಕಿಸುವಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ. ಜಿಲ್ಲೆಯೂ ಸುಭೀಕ್ಷವಾಗಿದೆ. ಎಲ್ಲಾ ರೀತಿಯ ಸಂಕಷ್ಟ ನಿವಾರಣೆಯಾಗಲಿದೆ ಎಂದರು.

ADVERTISEMENT

ಮೇಯರ್ ಸುನಿತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.