ADVERTISEMENT

ಸಭೆಯಲ್ಲೇ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ

​ಪ್ರಜಾವಾಣಿ ವಾರ್ತೆ
Published 14 ಜನವರಿ 2019, 11:39 IST
Last Updated 14 ಜನವರಿ 2019, 11:39 IST
ಕಾಗೋಡು ತಿಮ್ಮಪ್ಪ
ಕಾಗೋಡು ತಿಮ್ಮಪ್ಪ   

ಸಾಗರ:ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಸೋಮವಾರ ಬಹಿರಂಗ ಸಭೆಯಲ್ಲೇ ನಿತ್ರಾಣಗೊಂಡು, ಕುಸಿತು ಬಿದ್ದರು.

ಹೊಸನಗರ ತಾಲ್ಲೂಕಿನ ನಗರ ಹೋಬಳಿ ನಾಗರಿಕ ವೇದಿಕೆ ಪ್ರತಿಭಟನಾ ಸಭೆಯಲ್ಲಿ ಅವರುಪಾಲ್ಗೊಂಡಿದ್ದರು. ಕುಸಿದು ಬಿದ್ದಾಗ ಪ್ರಜ್ಞೆ ತಪ್ಪಿದ್ದ ಅವರನ್ನು ತ‌ಕ್ಷಣ ನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಸದ್ಯ ಚಿಕಿತ್ಸೆ ನಡೆಯುತ್ತಿದೆ.ದೇಹದಲ್ಲಿ ಸಕ್ಕರೆ ಅಂಶ ಹೆಚ್ಚಾಗಿದ್ದರಿಂದ ಸುಸ್ತಾಗಿ ಕುಸಿದು ಬಿದ್ದಿದ್ದರು.ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಪ್ರಜ್ಞೆ ಬಂದಿದೆಎಂದು ವೈದ್ಯರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.