ಕಾರ್ಗಲ್: ಇಲ್ಲಿನ ಮಹಾತ್ಮ ಗಾಂಧಿ ವಿದ್ಯುದಾಗಾರದ ಬಳಿ ಇರುವ ಎಮ್ಮಲಗ ಗುಂಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ಯುವಕ ನೀರು ಪಾಲಾಗಿದ್ದಾನೆ.
ಹಾವೇರಿ ಮೂಲದ ಗಣೇಶ ಬಂಡಸಿದ್ದಣ್ಣನವರ್ (21) ಮೃತ ಯುವಕ.
ಸೇತುವೆಕಾಮಗಾರಿಯ ಗಾರೆ ಕೆಲಸ ಮುಗಿಸಿದ ನಂತರ ಸ್ನಾನಕ್ಕೆ ಬಂದಿದ್ದಾರೆ. ಆ ಸಮಯದಲ್ಲಿ ಸ್ನೇಹಿತರ ಜತೆ ಸೆಲ್ಫಿ ತೆಗೆದುಕೊಳ್ಳುವಾಗ ಅವಘಡ ನಡೆದಿದೆ. ಜೋಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.