ADVERTISEMENT

ಕಾರಿಪುರ: ಕಾರಿನ ಗ್ಲಾಸ್ ಒಡೆದು ₹5 ಲಕ್ಷ ಕಳ್ಳತನ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2022, 8:34 IST
Last Updated 5 ನವೆಂಬರ್ 2022, 8:34 IST

ಶಿಕಾರಿಪುರ: ಕಾರಿನ ಗ್ಲಾಸ್ ಒಡೆದ ಕಳ್ಳರು ಸೀಟಿನ ಮೇಲೆ ಇಟ್ಟಿದ್ದ ₹5 ಲಕ್ಷ ಕಳ್ಳತನ ಮಾಡಿದ್ದಾರೆ. ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗ ಶನಿವಾರ ಈ ಕೃತ್ಯ ನಡೆದಿದೆ.

ಕಪ್ಪನಹಳ್ಳಿ ಗ್ರಾಮದ ನಿವಾಸಿ ಕೇಶವ್ ಎಸ್ ಬಿಐ ಬ್ಯಾಂಕಿನಿಂದ ₹5 ಲಕ್ಷ ಬಿಡಿಸಿಕೊಂಡು ಬಂದಿದ್ದರು.

ಈ ಹಣ ಇದ್ದ ಕವರ್ ತಮ್ಮ ಕಾರಿನ ಸೀಟಿನ ಮೇಲೆ ಇಟ್ಟು ಡಿಸಿಸಿ ಬ್ಯಾಂಕ್ ಒಳಗೆ ವ್ಯವಹಾರ ನಡೆಸಲು ಹೋದ ಸಂದರ್ಭದಲ್ಲಿ ಕಳ್ಳರು ಕಾರಿನ ಗ್ಲಾಸ್ ಒಡೆದು ಹಣ ಲಪಟಾಯಿಸಿದ್ದಾರೆ.

ADVERTISEMENT

ಸ್ಥಳಕ್ಕೆ ಡಿವೈಎಸ್ ಪಿ ಶಿವಾನಂದ ಮದರಖಂಡಿ, ಸಿಪಿಐ ಲಕ್ಷ್ಮಣ್, ಪಟ್ಟಣ ಪೊಲೀಸ್ ಠಾಣೆ ಪಿಎಸ್ ಐ ಪ್ರಶಾಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳ್ಳತನಕ್ಕೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.