ADVERTISEMENT

ಕೇಳಿದಷ್ಟು ನೀಡಲು ನೋಟ್‌ ಪ್ರಿಂಟ್ ಮಾಡುವುದಿಲ್ಲ: ಸಿ.ಎಂ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2019, 4:38 IST
Last Updated 14 ಆಗಸ್ಟ್ 2019, 4:38 IST
   

ಶಿವಮೊಗ್ಗ: ‘ಬೆಳೆಹಾನಿಯ ಅಂದಾಜು ಸಿದ್ಧಪಡಿಸಲು ಅವಸರ ಬೇಡ. ಕೇಳಿದಷ್ಟು ಹಣ ನೀಡಲು ಸರ್ಕಾರದಲ್ಲಿ ನೋಟ್‌ ಪ್ರಿಂಟ್‌ ಮಾಡುವ ಯಂತ್ರವಿಲ್ಲ. 8ರಿಂದ 10 ದಿನಗಳು ಸಮಯ ತೆಗೆದುಕೊಂಡು ನಿಖರ ವರದಿ ನೀಡಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅತಿವೃಷ್ಟಿ ನಷ್ಟದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಪಡಿಸುವ ವನ್ಯಜೀವಿ ವಿಭಾಗದ ಡಿಎಫ್‌ಒ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ‘ಹೊಂದಿಕೊಂಡು ಹೋಗಿ ಇಲ್ಲವೇ ರಾಯಚೂರು, ಕಲಬುರ್ಗಿಗೆ ಹೋಗಲು ಸಿದ್ಧರಾಗಿ’ ಎಂದು ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.