ADVERTISEMENT

ಶಿವಮೊಗ್ಗ: ಗಾಂಜಾ ಹಾವಳಿ ನಿಯಂತ್ರಣಕ್ಕೆ ಎಸ್‌ಪಿಗೆ ಆಯನೂರು ಮಂಜುನಾಥ್‌ ಪತ್ರ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 15:53 IST
Last Updated 22 ಅಕ್ಟೋಬರ್ 2021, 15:53 IST
ಆಯನೂರು ಮಂಜುನಾಥ್‌
ಆಯನೂರು ಮಂಜುನಾಥ್‌   

ಶಿವಮೊಗ್ಗ: ಗಾಂಜಾ ಹಾವಳಿ ಸಂಪೂರ್ಣ ನಿಯಂತ್ರಿಸಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದಾರೆ.

ನಗರದ ಎಲ್ಲಾ ಕಡೆ ಗಾಂಜಾ ದೊರೆಯುತ್ತಿದೆ. ಗಾಂಜಾ ಹಾವಳಿ ಹೆಚ್ಚಾಗಿದೆ. ಶಾಲಾ ಕಾಲೇಜಿಗೆ ಹೋಗುವ ಯುವ ಸಮೂಹ ಮಾದಕ ಸೇವನೆಯಿಂದ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ನಗರದ ಕೃಷಿ ಕಾಲೇಜು ಸೇರಿದಂತೆ ಬಹುತೇಕ ಕಾಲೇಜುಗಳ ಸುತ್ತ ಗಾಂಜಾ ವ್ಯಸನಿಗಳ ಹಾವಳಿ ಹೆಚ್ಚಾಗಿದೆ. ಗಾಂಜಾ ಮತ್ತಿನಿಂದ ದಾರಿಯಲ್ಲಿ ಓಡಾಡುವ ನಾಗರಿಕರ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಗಾಂಜಾ ವ್ಯಸನಿಗಳಿಂದ ಈಚೆಗೆ ಶಾಂತಿಗೆ ಭಂಗವಾಗುತ್ತಿದೆ. ಪ್ರತಿ ಠಾಣಾ ವ್ಯಾಪ್ತಿಯಲ್ಲೂ ಸಬ್‌ಇನ್‌ಸ್ಪೆಕ್ಟರ್, ಸಿಬ್ಬಂದಿ ಗಸ್ತು ತಿರುಗಬೇಕು. ಗಾಂಜಾ ಮಾರಾಟ ಮಾಡುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ, ತಡೆಗಟ್ಟಬೇಕು. ನಿರ್ಲಕ್ಷ್ಯ ಮಾಡುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಗಾಂಜಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೆಒಳ್ಳುವಂತೆ ಗೃಹಸಚಿವ ಅರಗ ಜ್ಞಾನೇಂದ್ರ ಅವರಿಗೂ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.