ಸಾಗರ: ಮಲೆನಾಡು ಪ್ರದೇಶಕ್ಕೆ ಸಂಬಂಧಪಟ್ಟ ಪ್ರಮುಖ ದಾಖಲೆಯಾಗಿರುವ ಕಸ್ತೂರಿ ರಂಗನ್ ವರದಿ ಶೀಘ್ರದಲ್ಲೇ ಕನ್ನಡದಲ್ಲಿ ಲಭ್ಯವಾಗಲಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ತಿಳಿಸಿದ್ದಾರೆ.
‘ಕಸ್ತೂರಿ ರಂಗನ್ ವರದಿ ಇಂಗ್ಲಿಷ್ ಭಾಷೆಯಲ್ಲಿದ್ದು, ಅದನ್ನು ಕನ್ನಡಕ್ಕೆ ಅನುವಾದಿಸಿದರೆ ಹೆಚ್ಚು ಜನರು ಓದುವ ಮೂಲಕ ವಾಸ್ತವಾಂಶ ತಿಳಿಯಲು ಅನುಕೂಲವಾಗುತ್ತದೆ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಷಾಂತರ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದು ಕಸ್ತೂರಿ ರಂಗನ್ ವರದಿ ಕನ್ನಡಕ್ಕೆ ಅನುವಾದಿಸಿಕೊಡುವಂತೆ ನಿರ್ದೇಶಿಸಿದ್ದಾರೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.