ಶಿವಮೊಗ್ಗ: ‘ಗುತ್ತಿಗೆದಾರ ಸಂತೋಷ್ ಪಾಟೀಲ ಸಾವು ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ ಶುರುವಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು’ ಎಂದು ಪ್ರಕರಣದಲ್ಲಿ ಆರೋಪಿಯೂ ಆಗಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು. ನಗರದಲ್ಲಿ ಶನಿವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.
‘ಪ್ರಕರಣದಲ್ಲಿ ಯಾರೋ ಸಂತೋಷ್ ಅವರನ್ನು ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆ ಇದೆ. ಸೂಕ್ತ ತನಿಖೆಯಿಂದ ಸತ್ಯ ಹೊರಗೆ ಬರಬೇಕಿದೆ. ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದಾರೆ ಎನ್ನುವ ಸಂಗತಿ ಇದೆ. ತನಿಖೆ ಮೂಲಕ ಸತ್ಯ ಬಹಿರಂಗವಾಗಬೇಕಿದೆ. ನಂತರ ಈ ಕುರಿತು ಮಾತನಾಡುವೆ’ ಎಂದರು.
ಇವನ್ನೂ ಓದಿ
*ಚೆನ್ನೈನಲ್ಲಿ ಕನ್ನಡದಲ್ಲೇ ಕೆಜಿಎಫ್ ಸಿನಿಮಾ ವೀಕ್ಷಿಸಿದ ರಜನಿಕಾಂತ್: ಹೇಳಿದ್ದೇನು?
*ಈಶ್ವರಪ್ಪ ಬಂಧನಕ್ಕೆ ಒತ್ತಾಯ: ಕಾಂಗ್ರೆಸ್ ಪ್ರತಿಭಟನೆ
*ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ: ತಲೆದಂಡದಲ್ಲೂ ಶಕ್ತಿ ಪ್ರದರ್ಶನ
*ಆತ್ಮಹತ್ಯೆ ಮಾಡಿಕೊಂಡಸಂತೋಷ್ ಕಾಫಿನಾಡಿನ ಹೋಂ ಸ್ಟೇನಲ್ಲಿ3 ದಿನ ತಂಗಿದ್ದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.